ಕೋಟಾ ಕ್ಷೇತ್ರದ ಸಂಸದ ಲೋಕಸಭೆ ನೂತನ ಸ್ಪೀಕರ್ : ಹೆಸರು ಅಂತಿಮ

Published : Jun 18, 2019, 01:43 PM ISTUpdated : Jun 18, 2019, 02:01 PM IST
ಕೋಟಾ ಕ್ಷೇತ್ರದ ಸಂಸದ ಲೋಕಸಭೆ ನೂತನ ಸ್ಪೀಕರ್ : ಹೆಸರು ಅಂತಿಮ

ಸಾರಾಂಶ

ಈಗಾಗಲೇ 17 ನೇ ಲೋಕಸಭಾ ಮೊದಲ ಅಧಿವೇಶನ ಆರಂಭವಾಗಿದೆ. ಇದೇ ವೇಳೆ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಜೋರಾಗಿದ್ದು, ಬಿಜೆಪಿಯಿಂದ ನಾಯಕರು ಸ್ಪೀಕರ್ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದಾರೆ. 

ನವದೆಹಲಿ [ಜೂ.18] : ದೇಶದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, 17 ಲೋಕಸಭಾ ಮೊದಲ ಅಧಿವೇಶನ ಆರಂಭವಾಗಿದೆ.  ಇದೇ ವೇಳೆ ಲೋಕಸಭೆಗೆ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಜೋರಾಗಿದೆ. 

ರಾಜಸ್ಥಾನದ ಕೋಟಾ ಕ್ಷೇತ್ರದ ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು 17 ನೇ ಲೋಕಸಭಾ ಸ್ಪೀಕರ್ ಅಭ್ಯರ್ಥಿಯಾಗಿ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಸ್ಪೀಕರ್ ಆಗಿ ಬಿರ್ಲಾ ಆಯ್ಕೆ ಬಹುತೇಕ ಖಚಿತವಾಗಿದೆ. 

ಈ ಬಗ್ಗೆ ಬಿರ್ಲಾ ಪತ್ನಿ ಮೀನಾ ಬಿರ್ಲಾ ಅವರು ಪ್ರತಿಕ್ರಿಯಿಸಿದ್ದು,  ತಮ್ಮ ಕುಟುಂಬಕ್ಕೆ ಇದೊಂದು ಹೆಮ್ಮೆ ತರುವಂತಹ ವಿಚಾರ.  ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಅವರನ್ನು ಬಿಜೆಪಿಯಿಂದ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ನಾಯಕರಿಗೆ ಧನ್ಯವಾದ ಎಂದು ಹೇಳಿದ್ದಾರೆ. 

ಇನ್ನು ಓಂ ಬಿರ್ಲಾ ಲೋಕಸಭಾ ಸ್ಪೀಕರ್ ಆಗಿ ಆಯ್ಕೆ ಮಾಡಲು ಹಲವು ಪಕ್ಷಗಳು ಕೂಡ ಬೆಂಬಲ ಸೂಚಿಸಿವೆ. JDU, AIADMK, BJD, ಅಪ್ನಾ ದಳ್ ಸೇರಿದಂತೆ ವಿವಿಧ ಪಕ್ಷಗಳಿಂದ ಬೆಂಬಲ ದೊರಕಿದೆ. 

57 ವರ್ಷದ ಬಿರ್ಲಾ ರಾಜಸ್ತಾನ ವಿಧಾನಸಭೆಯಲ್ಲಿ ಮೂರು ಬಾರಿ ಶಾಸಕರಾಗಿದ್ದರು. 17 ನೇ ಲೋಕಸಭೆಗೆ ಅವರು ಎರಡನೇ ಬಾರಿಗೆ ಕೋಟ ಕ್ಷೇತ್ರದಿಂದ ಆಯ್ಕೆ ಆಗಿದ್ದಾರೆ.  ಬಿರ್ಲಾ ಅವರ ಪತ್ನಿ ಡಾ. ಅಮಿತಾ ಬಿರ್ಲಾ. ಇಬ್ಬರು ಹೆಣ್ಣು ಮಕ್ಕಳು. ಆಕಾಂಕ್ಷ ಚಾರ್ಟರ್ಡ ಅಕೌಂಟೆಂಟ್. ಅಂಜಲಿ ರಾಮಾಜಾಸ್ ಕಾಲೇಜಿನಲ್ಲಿ ರಾಜಕೀಯ ಶಾಸ್ತ್ರದ ವಿದ್ಯಾರ್ಥಿ.

2019ರ ಲೋಕಸಭಾ ಚುನಾವಣೆಗೆ ಕೋಟಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸಿನ ರಾಮನಾರಾಯಣ ಅವರನ್ನು  2.5 ಲಕ್ಷ ಮತಗಳ ಅಂತರದಿಂದ ಪರಾಭವಗೊಳಿಸಿದ್ದರು.  ಓಂ ಪ್ರಕಾಶ್  ಒಟ್ಟು ಮೂರು ಬಾರಿ ಶಾಸಕರಾಗಿದ್ದು, ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!
ದೆವ್ವಗಳ ಬಗ್ಗೆ ಪಿಎಚ್‌ಡಿ ಮಾಡಲಿದ್ದಾರೆ ಬಾಗೇಶ್ವರ ಬಾಬಾ ಧೀರೇಂದ್ರ ಶಾಸ್ತ್ರಿ! ಘೋಸ್ಟ್ ಬಗ್ಗೆ ತಿಳಿಯಲು ನಿಮಗೆ ಆಸಕ್ತಿ ಇದೆಯೇ?