
ಅಜ್ಮೀರ್ : ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಸ್ವಚ್ಛ ಭಾರತ ಅಭಿಯಾನದ ಯಶಸ್ಸ್ಿಗಾಗಿ ಸಾಕಷ್ಟು ರೀತಿಯ ಕ್ರಮ ಕೈಗೊಳ್ಳುತ್ತಿದ್ದರೆ ಇತ್ತ ಬಿಜೆಪಿ ಸಚಿವರೋರ್ವರು ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಿ ವಿವಾದಕ್ಕೀಡಾಗಿದ್ದಾರೆ.
ರಾಜಸ್ಥಾನದ ಸಚಿವರೋರ್ವರು ಗೋಡೆಯ ಬಳಿಯಲ್ಲಿ ಕುಳಿತುಕೊಂಡು ಮೂತ್ರ ವಿಸರ್ಜನೆ ಮಾಡಿರುವ ಫೊಟೊ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಅಜ್ಮೀರ್ ನಲ್ಲಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ರ್ಯಾಲಿಯ ಪೋಸ್ಟರ್ ಹಾಕಲಾಗಿದ್ದು, ಆ ಪೋಸ್ಟರ್ ಪಕ್ಕದಲ್ಲಿಯೇ ಕುಳಿತುಕೊಂಡು ಸಾರ್ವಜನಿಕ ಸ್ಥಳದಲ್ಲಿ ಪೂತ್ರ ವಿಸರ್ಜನೆ ಮಾಡಿದ್ದಾರೆ.
ಸಚಿವ ಶಂಭು ಸಿಂಗ್ ಕಟೇಸರ್ ಅವರು ಈ ರೀತಿಯಾಗಿ ಮೂತ್ರ ವಿಸರ್ಜನೆ ಮಾಡಿದ್ದಲ್ಲದೇ ಇದೀಗ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇದೊಂದು ಅತ್ಯಂತ ಪ್ರಾಚೀನ ಸಂಪ್ರದಾಯವಾಗಿದ್ದು, ತಾವು ಯಾವುದೇ ತಪ್ಪನ್ನು ಎಸಗಿಲ್ಲ ಎಂದು ಹೇಳಿದ್ದಾರೆ.
ಅಲ್ಲದೇ ಪೋಸ್ಟರ್ ಬಳಿ ಮೂತ್ರ ವಿಸರ್ಜಿಸಿದ್ದಾರೆ ಎಂದು ಆರೋಪ ಮಾಡಿರುವುದರ ಸಂಬಂಧವೂ ಕೂಡ ಪ್ರತಿಕ್ರಿಯಿಸಿದ ಅವರು ಪೋಸ್ಟರ್ ತಾವು ಮೂತ್ರ ವಿಸರ್ಜನೆ ಮಾಡುವ ಜಾಗದಿಂದ ಅತ್ಯಂತ ದೂರದಲ್ಲಿಯೇ ಇತ್ತು ಎಂದು ಹೇಳಿದ್ದಾರೆ.
ಬಿಜೆಪಿ ಸಚಿವರ ಈ ವರ್ತನೆಯಿಂದ ತೀವ್ರ ಮುಜುಗರ ಎದುರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದರೆ ಇತ್ತ ಇವರು ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.