ಸಾವರ್ಕರ್‌ ‘ಕ್ರಾಂತಿಕಾರಿ’ ಪಟ್ಟತೆಗೆದು ಹೇಡಿ ಪಟ್ಟ!

Published : May 15, 2019, 08:38 AM IST
ಸಾವರ್ಕರ್‌ ‘ಕ್ರಾಂತಿಕಾರಿ’ ಪಟ್ಟತೆಗೆದು ಹೇಡಿ ಪಟ್ಟ!

ಸಾರಾಂಶ

ಸಾವರ್ಕರ್‌ರ ‘ಕ್ರಾಂತಿಕಾರಿ’ ಪಟ್ಟತೆಗೆದು ಹೇಡಿ ಪಟ್ಟ: ಕಾಂಗ್ರೆಸ್‌ ಸರ್ಕಾರ ನಿರ್ಧಾರ|  ವಸುಂಧರಾ ರಾಜೆ ನೇತೃತ್ವದ ಸರ್ಕಾರ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಹಿಂದುತ್ವವನ್ನು ವೈಭವೀಕರಿಸುವ ಅಂಶಗಳಿಗೆ ಕಾಂಗ್ರೆಸ್‌ ಸರ್ಕಾರ ಕತ್ತರಿ 

ಜೈಪುರ[ಮೇ.15]: ರಾಜಸ್ಥಾನದಲ್ಲಿ ಈ ಹಿಂದಿನ ವಸುಂಧರಾ ರಾಜೆ ನೇತೃತ್ವದ ಸರ್ಕಾರ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಹಿಂದುತ್ವವನ್ನು ವೈಭವೀಕರಿಸುವ ಅಂಶಗಳಿಗೆ ಕಾಂಗ್ರೆಸ್‌ ಸರ್ಕಾರ ಕತ್ತರಿ ಹಾಕಲು ಮುಂದಾಗಿದೆ.

10ನೇ ತರಗತಿಯ ಇತಿಹಾಸ ಪಠ್ಯದಲ್ಲಿನ ಭಾರತದ ಸ್ವಾತಂತ್ರ್ಯ ಹೋರಾಟ ಎಂಬ ಅಧ್ಯಾಯದಲ್ಲಿ ಆರ್‌ಎಸ್‌ಎಸ್‌ ಮುಖಂಡ ವಿನಾಯಕ್‌ ಸಾವರ್ಕರ್‌ ಅವರನ್ನು ‘ವೀರ ಕ್ರಾಂತಿಕಾರಿ’ ಎಂದು ಬಣ್ಣಿಸಲಾಗಿತ್ತು. ಸಾವರ್ಕರ್‌ ಅವರನ್ನು ‘2 ಬಾರಿ ಜೀವಾವಧಿ ಶಿಕ್ಷೆಗೆ ಗುರಿಯಾದ ಏಕೈಕ ವೀರ ಕ್ರಾಂತಿಕಾರಿ ಎಂದು ಬಣ್ಣಿಸಲಾಗಿತ್ತು. ಆದರೆ ಇದೀಗ ಪ್ರೌಢ ಶಿಕ್ಷಣ ಮಂಡಳಿಯು ಹೊಸ ಪಠ್ಯ ಕ್ರಮದಲ್ಲಿ ಸಾವರ್ಕರ್‌ ಅವರನ್ನು ಹೊಗಳುವ ವಿವರಣೆ ತೆಗೆದುಹಾಕಿ, ಸಾವರ್ಕರ್‌ ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ನೀಡಿದ ಅಂಶಗಳನ್ನು ಸೇರ್ಪಡೆ ಮಾಡಲು ನಿರ್ಧರಿಸಿದೆ.

ಈ ನಡುವೆ ಸರ್ಕಾರದ ನಿರ್ಧಾರವನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ಇದು ಹಿಂದುತ್ವ ವಿರೋಧಿ ಧೋರಣೆ ಎಂದು ಮಾಜಿ ಶಿಕ್ಷಣ ಸಚಿವ ವಾಸುದೇವ್‌ ದೇವಾನಿ ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ