ಬಿಜೆಪಿ ತಂದ ನೀತಿ ಕಾಂಗ್ರೆಸ್ ನಿಂದ ರದ್ದಾಯ್ತು

Published : Dec 31, 2018, 01:23 PM IST
ಬಿಜೆಪಿ ತಂದ ನೀತಿ ಕಾಂಗ್ರೆಸ್ ನಿಂದ ರದ್ದಾಯ್ತು

ಸಾರಾಂಶ

ಬಿಜೆಪಿ ಸರ್ಕಾರ ಜಾರಿಗೆ ತಂದ ನಿಯಮವೊಂದನ್ನು ಕಾಂಗ್ರೆಸ್ ಸರ್ಕಾರ ಬದಲಾಯಿಸಿದೆ.  ಪಂಚಾಯ್ತಿ ಹಾಗೂ ಇತರ ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳಿಗೆ ಇದ್ದ ಕನಿಷ್ಠ ವಿದ್ಯಾರ್ಹತೆ ಮಿತಿಯನ್ನು ತೆಗೆದು ಹಾಕಿ, ಪ್ರತಿ ಪ್ರಜೆಗೂ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕಿದೆ ಎಂದು ಘೋಷಿಸಿದೆ. 

ಜೈಪುರ: ರಾಜಸ್ಥಾನದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ ಮೊದಲ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ. 

ಪಂಚಾಯ್ತಿ ಹಾಗೂ ಇತರ ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳಿಗೆ ಇದ್ದ ಕನಿಷ್ಠ ವಿದ್ಯಾರ್ಹತೆ ಮಿತಿಯನ್ನು ತೆಗೆದು ಹಾಕಿ, ಪ್ರತಿ ಪ್ರಜೆಗೂ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕಿದೆ ಎಂದು ಘೋಷಿಸಿದೆ. 

ಹಿಂದಿನ ರಾಜೇ ಸರ್ಕಾರ ನಗರಾಡಳಿತ ಚುನಾವಣೆಗಳಿಗೆ 10 ನೇ ತರಗತಿ ಹಾಗೂ ಪಂಚಾಯ್ತಿ ಸರಪಂಚ ಚುನಾವಣೆಗಳಿಗೆ 8 ನೇ ತರಗತಿ, ಪಂಚಾಯ್ತಿ ಸದಸ್ಯ ಹಾಗೂ ಜಿಲ್ಲಾಪಂಚಾಯ್ತಿ ಚುನಾವಣೆಗೆ  10 ನೇ ತರಗತಿ ಕನಿಷ್ಠ ವಿದ್ಯಾರ್ಹತೆ ನಿಗದಿಮಾಡಿತ್ತು. ಇದೇ ವೇಳೆ, ಈಗಾಗಲೇ ಘೋಷಿಸಿರುವ ರೈತರ ಸಾಲ ಮನ್ನಾವನ್ನು ಕಾರ್ಯರೂಪಕ್ಕೆ ತರಲು ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. 

ಅಂತೆಯೇ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ದೀನದಯಾಳ ಉಪಾಧ್ಯಾಯ ಅವರ ಚಿತ್ರ ಇರುವ ಲೆಟರ್‌ಪ್ಯಾಡ್ (ಸಿಕ್ಕಾ)ಗಳನ್ನು ರದ್ದುಗೊಳಿಸಿ ಅಶೋಕಸ್ತಂಭ ಇರುವ ಲೆಟರ್‌ಪ್ಯಾಡ್ ಜಾರಿಗೆ ತರಲು ತೀರ್ಮಾನಿಸಿದೆ. ಇದೇ ವೇಳೆ, ರಾಜೇ ಸರ್ಕಾರವು ಶಿಕ್ಷಣದ ಕೇಸರೀಕರಣ ಮಾಡಿತ್ತು ಎಂದಿರುವ ಸರ್ಕಾರ ಪಠ್ಯಗಳಲ್ಲಿನ ‘ಕೇಸರಿ’ ಅಂಶಗಳನ್ನು ತೆಗೆದು ಹಾಕಲು ತೀರ್ಮಾನಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BREAKING: ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು; ಭೂಮಿ ಕಂಪಿಸಿದ ಅನುಭವ, ಚಿಕ್ಕಮಲ್ಲನಹೊಳೆ ಗ್ರಾಮಸ್ಥರಲ್ಲಿ ಆತಂಕ
20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!