
ಬೆಂಗಳೂರು(ಫೆ.12): ಎಸ್ಎಸ್ಎಲ್ಸಿ ಪರೀಕ್ಷೆ ಹತ್ತಿರವಾಗ್ತಿದೆ. ಹೀಗಾಗಿ ಪ್ರತೀ ವರ್ಷವೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಜಯನಗರ ಶೈಕ್ಷಣಿಕ ಸಮಿತಿ ಉಚಿತ ತರಬೇತಿಯನ್ನು ನೀಡ್ತಿದೆ. ಕಳೆದ ಎಂಟು ವರ್ಷದಿಂದ ಉಚಿತ ತರಬೇತಿ ನೀಡುತ್ತಿರುವ ಸಮಿತಿಯ ಈ ವರ್ಷದ ಸಮಾರೋಪ ಸಮಾರಂಭ ಇಂದು ನಡೆಯಿತು. ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಸ್ಥಳೀಯ ಶಾಸಕ ವಿಜಯಕುಮಾರ್, ಸ್ಥಳೀಯ ಕಾರ್ಪೊರೇಟರ್ ಎನ್ ನಾಗರಾಜು ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು. ಇದೇ ವೇಳೆ ಮಾತನಾಡಿದ ರಾಜೀವ್ ಚಂದ್ರಶೇಖರ್. ಎಸ್ಎಸ್ಎಲ್ಸಿ ನಿಮ್ಮ ಭವಿಷ್ಯವನ್ನು ನಿರ್ಧರಿಸುವ ಘಟ್ಟ, ಹೀಗಾಗಿ ಹೆಚ್ಚು ಪರಿಶ್ರಮದಿಂದ ಉತ್ತಮ ಅಂಕ ಗಳಿಸಿ ಉನ್ನತ ಹಂತಕ್ಕೇರಬೇಕು. ಸಾಮಾಜಿಕ ಮಾಧ್ಯಮಗಳಿಂದ ದೂರವುಳಿದು ಪರೀಕ್ಷೆಗೆ ತಯಾರಿ ನಡೆಸಿ. ಯಾವುದು ಕಷ್ಟವಲ್ಲ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.