
ಉತ್ತರ ಪ್ರದೇಶ (ಜೂ.05); ಮಿರ್ಜಾಪುರದಲ್ಲಿರುವ ರಾಜೀವ್ ಗಾಂಧಿ ಪ್ರತಿಮೆಯನ್ನು ನೆಲಸಮ ಮಾಡಲಾಗಿದ್ದು, ಕಾಂಗ್ರೆಸ್ ಇದನ್ನು ತೀವ್ರವಾಗಿ ಖಂಡಿಸಿದೆ. ರಾಜ್ಯ ಸರ್ಕಾರ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.
ಮಿರ್ಜಾಪುರದಲ್ಲಿರುವ ರಾಜೀವ್ ಗಾಂಧಿ ಪ್ರತಿಮೆಯನ್ನು ನೆಲಸಮ ಮಾಡಿರುವುದನ್ನು ನಾವು ಖಂಡಿಸುತ್ತೇವೆ. ಸರ್ಕಾರದ ಈ ನಡೆ ಸಾವಿರಾರು ಕಾಂಗ್ರೆಸ್ ಅನುಯಾಯಿಗಳ ಭಾವನೆಗಳಿಗೆ ನೋವುಂಟು ಮಾಡಿದೆ. ರಾಜೀವ್ ಗಾಂಧಿ ಒಬ್ಬ ಗ್ರೇಟ್ ನಾಯಕ. ಅವರ ಬಗ್ಗೆ ನಮಗೆಲ್ಲಾ ಬಹಳ ಗೌರವವಿದೆ. ಹಾಗಾಗಿ ಈ ಕೂಡಲೇ ಸರ್ಕಾರ ತನಿಖೆಗೆ ಆದೇಶಿಸಬೇಕು ಹಾಗೂ ಶಿಕ್ಷೆ ನೀಡಬೇಕು ಎಂದು ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಹಾನಿಗೊಳಿಸಿದ ಪ್ರತಿಮೆಯ ಕೆಳಗೆ ಕಿಡಿಗೇಡಿಗಳು, ಇದು ನಮ್ಮ ಸರ್ಕಾರ. ರಾಜೀವ್ ಗಾಂದಿಯನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗಿದೆ ಎಂದು ಬರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.