ಶಾರದಾ ಹಗರಣ: ರಾಜೀವ್ ಕುಮಾರ್ ‘ಬಂಧನದಿಂದ ಸುರಕ್ಷತೆ’ ಆದೇಶ ರದ್ದು!

Published : May 17, 2019, 01:04 PM IST
ಶಾರದಾ ಹಗರಣ: ರಾಜೀವ್ ಕುಮಾರ್ ‘ಬಂಧನದಿಂದ ಸುರಕ್ಷತೆ’ ಆದೇಶ ರದ್ದು!

ಸಾರಾಂಶ

ಸಂಕಷ್ಟದಲ್ಲಿ ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್| ಬಂಧನದಿಂದ ಸುರಕ್ಷತೆ ಆದೇಶ ಹಿಂಪಡೆದ ಸುಪ್ರೀಂಕೋರ್ಟ್| ಶಾರದಾ ಚಿಟ್ ಫಂಡ್ ಹಗರಣದ ಸಾಕ್ಷ್ಯ ನಾಶಪಡಿಸಿದ ಗಂಭೀರ ಆರೋಪ| ಐಪಿಎಸ್ ಅಧಿಕಾರಿಗೆ ಇದೀಗ ಮತ್ತೆ ಬಂಧನ ಭೀತಿ| ಯಾವುದೇ ಕ್ಷಣದಲ್ಲಿ ರಾಜೀವ್ ಕುಮಾರ್ ಬಂಧನ ಸಾಧ್ಯತೆ|

ನವದೆಹಲಿ(ಮೇ.17): ಮಹತ್ವದ ಬೆಳವಣಿಗೆಯೊಂದರಲ್ಲಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ನೀಡಲಾಗಿದ್ದ ಬಂಧನದಿಂದ ಸುರಕ್ಷತೆ ಆದೇಶವನ್ನು ಸುಪ್ರೀಂಕೋರ್ಟ್ ತೆರುವು ಗೊಳಿಸಿದೆ. 

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ರಾಜೀವ್ ಕುಮಾರ್ ವಿರುದ್ಧ ಸಾಕ್ಷ್ಯ ನಾಶಪಡಿಸಿದ ಗಂಭೀರ ಆರೋಪವಿದ್ದು, ಐಪಿಎಸ್ ಅಧಿಕಾರಿಗೆ ಇದೀಗ ಮತ್ತೆ ಬಂಧನ ಭೀತಿ ಎದುರಾಗಿದೆ.

ಈ ಮೊದಲು ರಾಜೀವ್ ಕುಮಾರ್ ಅವರನ್ನು ವಿಚಾರಣೆಗೊಳಪಡಿಸಲು ಸಿಬಿಐ ಅಧಿಕಾರಿಗಳು ಕೋಲ್ಕತ್ತಾಗೆ ತೆರಳಿದ್ದಾಗ, ಅವರನ್ನೇ ಕೋಲ್ಕತ್ತಾ ಪೊಲೀಸರು ಬಂಧಿಸುವ ಮೂಲಕ ಹೈಡ್ರಾಮಾ ಸೃಷ್ಟಿಯಾಗಿತ್ತು. ಅಲ್ಲದೇ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಆರೋಪಿಸಿ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಧರಣಿ ಕುಳಿತಿದ್ದರು. 

ಇದೀಗ ಸಿಬಿಐ ವಾದಕ್ಕೆ ಮನ್ನಣೆ ನೀಡಿರುವ ಸುಪ್ರೀಂಕೋರ್ಟ್, ಈ ಹಿಂದೆ ನೀಡಿದ್ದ ಬಂಧನದಿಂದ ಸುರಕ್ಷತೆ ಆದೇಶವನ್ನು ಹಿಂದಕ್ಕೆ ಪಡೆದುಕೊಂಡಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಸಿಬಿಐ ಅಧಿಕಾರಿಗಳು ರಾಜೀವ್ ಕುಮಾರ್ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?