
ನವದೆಹಲಿ (ಸೆ.22): ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆ ಸ್ವಚ್ಚ ಭಾರತ್ ಯೋಜನೆಗೆ ಸೂಪರ್’ಸ್ಟಾರ್ ರಜನೀಕಾಂತ್ ಫುಲ್ ಸಪೋರ್ಟ್ ನೀಡಿದ್ದಾರೆ.
ಪ್ರಧಾನಿ ಮೋದಿಯವರು ಉದ್ಯಮಿಗಳು, ಸೆಲೆಬ್ರಿಟಿಗಳಿಗೆ ವೈಯಕ್ತಿಕವಾಗಿ ಪತ್ರ ಬರೆದು ಸ್ವಚ್ಚ ಭಾರತ ಯೋಜನೆಗೆ ಬೆಂಬಲ ನೀಡಿ ಹಾಗೂ ಮುಂದಾಗಿ ಎಂದು ಕೇಳಿಕೊಂಡಿದ್ದರು. ಮಹಾತ್ಮ ಗಾಂಧೀಯವರ ನಂಬಿಕೆಯಾದ ಸ್ವಚ್ಚತೆಯಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಪತ್ರದಲ್ಲಿ ಹೇಳಿದ್ದರು. ಈ ಹಿನ್ನಲೆಯಲ್ಲಿ ರಜನೀಕಾಂತ್ ಇಂದು ಬೆಂಬಲ ಸೂಚಿಸಿದ್ದಾರೆ.
ಸೆ. 15 ರಿಂದ ಗಾಂಧಿ ಜಯಂತಿವರೆಗೆ ‘ಸ್ವಚ್ಚತಾ ಹೇ ಸೇವಾ’ ಆಚರಿಸಲಾಗುತ್ತದೆ. ಇದಕ್ಕೆ ರಜನೀಕಾಂತ್ ಸೇರಿದಂತೆ ಅಕ್ಷಯ್ ಕುಮಾರ್, ಅನುಷ್ಕಾ ಶರ್ಮಾ, ಸಚಿನ್ ತೆಂಡೂಲ್ಕರ್ ಬೆಂಬಲ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.