
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಮೇ 30ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮಿಳು ಚಿತ್ರರಂಗದ ಪ್ರಸಿದ್ಧ ನಟರಾದ ರಜನೀಕಾಂತ್ ಹಾಗೂ ಕಮಲ್ಹಾಸನ್ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಇಬ್ಬರೂ ನಟರು ಸಮಾರಂಭದಲ್ಲಿ ಭಾಗವಹಿಸುತ್ತಾರಾ ಎಂಬುದು ಖಚಿತಗೊಂಡಿಲ್ಲ. ರಜನೀಕಾಂತ್ ಅವರು ತಮ್ಮದೇ ಆದ ಪಕ್ಷವನ್ನು ಘೋಷಣೆ ಮಾಡಿದ್ದಾರೆ.
ಕಮಲ್ಹಾಸನ್ ಅವರು ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಸೋಲಿನ ಕಹಿ ಉಂಡಿದ್ದಾರೆ. ಚೆನ್ನೈಗೆ ಬಂದಾಗ ಮೋದಿ ಅವರನ್ನು ರಜನಿ ಭೇಟಿ ಮಾಡಿದ್ದರು. ಇತ್ತೀಚೆಗೆ ಕಮಲ್ ಹಾಸನ್ ಅವರು ಹೇಳಿಕೆಯೊಂದನ್ನು ನೀಡಿ ದೇಶದ ಮೊದಲ ಉಗ್ರ ಹಿಂದು, ಅದು ನಾಥೂರಾಮ್ ಗೋಡ್ಸೆ ಎಂದು ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.