ಕರುಣಾನಿಧಿಯವರನ್ನು ಭೇಟಿ ಮಾಡಿದ ರಜಿನಿಕಾಂತ್

Published : Dec 11, 2016, 09:37 AM ISTUpdated : Apr 11, 2018, 12:36 PM IST
ಕರುಣಾನಿಧಿಯವರನ್ನು ಭೇಟಿ ಮಾಡಿದ ರಜಿನಿಕಾಂತ್

ಸಾರಾಂಶ

ಹಲವು ಹೊತ್ತು ನಡೆದ ಈ ಭೇಟಿ ವೇಳೆ ರಜಿನೀಕಾಂತ್ ಮತ್ತು ಕರುಣಾನಿಧಿ ಮಧ್ಯೆ ಯಾವುದೇ ರಾಜಕೀಯ ವಿಚಾರ ಚರ್ಚೆಯಾಗಿಲ್ಲವೆನ್ನಲಾಗಿದೆ.

ಚೆನ್ನೈ(ಡಿ. 11): ಮಾಜಿ ಸಿಎಂ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿಯವರನ್ನು ನಟ ರಜನೀಕಾಂತ್ ಅವರನ್ನು ಭಾನುವಾರ ಭೇಟಿಯಾಗಿದ್ದಾರೆ. ಗೋಪಾಲಪುರಂನಲ್ಲಿನ ಕರುಣಾನಿಧಿ ನಿವಾಸಕ್ಕೆ ಭೇಟಿಯಿತ್ತ ರಜನೀಕಾಂತ್, ಡಿಎಂಕೆ ಮುಖ್ಯಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಮಾಧ್ಯಮಕ್ಕೆ ಸಿಕ್ಕ ಮಾಹಿತಿ ಪ್ರಕಾರ, ಹಲವು ಹೊತ್ತು ನಡೆದ ಈ ಭೇಟಿ ವೇಳೆ ರಜಿನೀಕಾಂತ್ ಮತ್ತು ಕರುಣಾನಿಧಿ ಮಧ್ಯೆ ಯಾವುದೇ ರಾಜಕೀಯ ವಿಚಾರ ಚರ್ಚೆಯಾಗಿಲ್ಲವೆನ್ನಲಾಗಿದೆ.

93 ವರ್ಷದ ಕರುಣಾನಿಧಿಯವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಡಿಸೆಂಬರ್ 1ರಂದು ಅವರನ್ನು ಕಾವೇರಿ ಆಸ್ಪತ್ರೆಗೂ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಪಕ್ಷದ ಕಾರ್ಯಕರ್ತರಿಗೂ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗುವ ಅವಕಾಶವಿರಲಿಲ್ಲ. ಇದೀಗ, ಅವರ ಆರೋಗ್ಯ ಸುಧಾರಿಸಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಆಸ್ಪತ್ರೆಯಿಂದ ಡಿಸ್'ಚಾರ್ಜ್ ಆಗಿರುವ ಕರುಣಾನಿಧಿ ತಮ್ಮ ನಿವಾಸದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking: ಕನ್ನಡ ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ: ಕಳಚಿಬಿದ್ದ ಸ್ವಾತಂತ್ರ್ಯ ಹೋರಾಟ ಮತ್ತು ಏಕೀಕರಣದ ಕೊಂಡಿ!
ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು?