ವಿಧಾನಸಭೆ - ಲೋಕಸಭಾ ಚುನಾವಣೆ ಏಕಕಾಲಕ್ಕೆ

By Kannadaprabha NewsFirst Published Jul 16, 2018, 12:17 PM IST
Highlights

ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಬಗ್ಗೆ ನಟ ರಜಿನಿಕಾಂತ್ ಅವರು ತಮ್ಮ ಸಹಮತವನ್ನು ವ್ಯಕ್ತಪಡಿಸಿದ್ದಾರೆ. 

ಚೆನ್ನೈ: ದೇಶದಲ್ಲಿ ರಾಜ್ಯ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳು ಏಕಕಾಲಕ್ಕೆ ನಡೆಯಬೇಕೆಂಬ ವಿಚಾರಕ್ಕೆ ಕಾಲಿವುಡ್ ಸೂಪರ್ ಸ್ಟಾರ್ ರಜನೀಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಪ್ರವೇಶಕ್ಕೆ ತುದಿಗಾಲಲ್ಲಿ ನಿಂತಿರುವ ರಜನೀಕಾಂತ್ ಅವರು ಭಾನುವಾರ ಮಾಧ್ಯಮಗಳೊಂದಿಗೆ ಈ ಬಗ್ಗೆ ಚರ್ಚೆ ಮಾಡಿದರು. ಈ ವೇಳೆ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಜನೀಕಾಂತ್, ‘ದೇಶದಲ್ಲಿ ಒಮ್ಮೆಗೇ ಚುನಾವಣೆಗಳು ನಡೆಯುವುದರಿಂದ ಹಣ ಮತ್ತು ಸಮಯ ಎರಡೂ ಉಳಿತಾಯವಾಗುತ್ತದೆ,’ ಎಂದು ಪ್ರತಿಪಾದಿಸಿದರು. 

ಅಲ್ಲದೆ, ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರು. ವೆಚ್ಚದ ಗ್ರೀನ್‌ಫೈಲ್ಡ್ ಚೆನ್ನೈ-ಸೇಲಂ ಅಷ್ಟಪಥದ ಹೆದ್ದಾರಿ ನಿರ್ಮಾಣ ವಾಗಬೇಕು ಎಂದು ಅವರು ಇದೇ ವೇಳೆ ಹೇಳಿದರು.

click me!