ರಜಿನಿಕಾಂತ್ ವಿರುದ್ಧ ಅಭಿಮಾನಿಗಳ ಆಕ್ರೋಶ

Published : Mar 24, 2017, 01:50 PM ISTUpdated : Apr 11, 2018, 12:57 PM IST
ರಜಿನಿಕಾಂತ್ ವಿರುದ್ಧ ಅಭಿಮಾನಿಗಳ ಆಕ್ರೋಶ

ಸಾರಾಂಶ

ಎಲ್​ಟಿಟಿಇ ಮತ್ತು ಲಂಕಾ ಸೇನೆ ನಡುವಿನ ಯುದ್ಧದಲ್ಲಿ ನಿರಾಶ್ರಿತರಾದ ತಮಿಳರಿಗೆ 22 ಕೋಟಿ ರೂ. ವೆಚ್ಚದಲ್ಲಿ ಜ್ಞಾನಂ ಸೇವಾ ಸಂಸ್ಥೆ 160 ಮನೆಗಳನ್ನು ನಿರ್ಮಿಸಿದೆ.

ಚೆನ್ನೈ(ಮಾ.24): ತಮಿಳುನಾಡು ಸೂಪರ್​ಸ್ಟಾರ್ ರಜನಿಕಾಂತ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ರಜನಿಕಾಂತ್ ವಿರುದ್ಧ ಅಭಿಮಾನಿಗಳ ಆಕ್ರೋಶಗೊಂಡಿದ್ದಾರೆ. ನಿರಾಶ್ರಿತ ತಮಿಳರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿರುವ ಶ್ರೀಲಂಕಾಗೆ ಭೇಟಿ ನೀಡದಂತೆ ಅಭಿಮಾನಿಗಳು ಆಗ್ರಹಿಸಿದ್ದಾರೆ. ಏಪ್ರಿಲ್ 9ರಂದು ಶ್ರೀಲಂಕಾದ ಜಾಫ್ನಾಗೆ ರಜನಿಕಾಂತ್ ಭೇಟಿ ನೀಡಲಿದ್ದಾರೆ.

ಎಲ್​ಟಿಟಿಇ ಮತ್ತು ಲಂಕಾ ಸೇನೆ ನಡುವಿನ ಯುದ್ಧದಲ್ಲಿ ನಿರಾಶ್ರಿತರಾದ ತಮಿಳರಿಗೆ 22 ಕೋಟಿ ರೂ. ವೆಚ್ಚದಲ್ಲಿ ಜ್ಞಾನಂ ಸೇವಾ ಸಂಸ್ಥೆ 160 ಮನೆಗಳನ್ನು ನಿರ್ಮಿಸಿದೆ. ಈ ಮನೆಗಳನ್ನು ರಜನಿಕಾಂತ್ ವಿತರಿಸಲಿದ್ದಾರೆ. ಬಳಿಕ ಜನರನ್ನುದ್ದೇಶಿಸಿ ಭಾಷಣ ಮಾಡುವ ಕಾರ್ಯಕ್ರಮವೂ ನಿಗದಿಯಾಗಿದೆ. ಇದೀಗ, ರಜನಿಕಾಂತ್ ಲಂಕಾ ಭೇಟಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಆದರೆ ಇದಾವುದರ ಬಗ್ಗೆಯೂ ರಜನಿಕಾಂತ್ ಇಲ್ಲಿಯವರೆಗೂ ಪ್ರತಿಕ್ರಿಯೆ ನೀಡಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜನವರಿ 1, 2026 ರಿಂದ 10 ನಿಯಮಗಳಲ್ಲಿ ಬದಲಾವಣೆ, ಸಂಬಳ-ಪಡಿತರ ಮೇಲೆ ನೇರ ಪರಿಣಾಮ
ಪಾಕಿಸ್ತಾನ ಸೇನೆಯಲ್ಲಿರುವ ಮಹಿಳಾ ಸೇನಾಧಿಕಾರಿಗಳ ಸಂಖ್ಯೆ ಎಷ್ಟು?