ಪಾಕ್ ವಿರುದ್ಧ ಗುಡುಗಿದ ರಾಜ್'ನಾಥ್ ಸಿಂಗ್

Published : Nov 06, 2016, 11:05 AM ISTUpdated : Apr 11, 2018, 12:59 PM IST
ಪಾಕ್ ವಿರುದ್ಧ ಗುಡುಗಿದ ರಾಜ್'ನಾಥ್ ಸಿಂಗ್

ಸಾರಾಂಶ

ನೆರೆರಾಷ್ಟ್ರವೊಂದು ಭಾರತದ ಮೇಲೆ ದಾಳಿ ಮಾಡಲು ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ. ಆದರೆ ನಮ್ಮ ಸರ್ಕಾರ ಇತರ ದೇಶಗಳೆದುರು ತಲೆತಗ್ಗಿಸಲು ಬಿಡುವುದಿಲ್ಲ ಎಂದು ರಾಜ್'ನಾಥ್ ಸಿಂಗ್ ಪಾಕಿಸ್ತಾನದ ಹೆಸರು ಪ್ರಸ್ತಾಪಿಸದೇ ವಾಗ್ದಾಳಿ ನಡೆಸಿದ್ದಾರೆ.

ರಾಯ್'ಪುರ(ನ.06): ನೆರೆಯ ರಾಷ್ಟ್ರವೊಂದು ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಾ ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೃಹಸಚಿವ ರಾಜ್'ನಾಥ್ ಸಿಂಗ್ ಹೇಳಿದ್ದಾರೆ.

ನೆರೆರಾಷ್ಟ್ರವೊಂದು ಭಾರತದ ಮೇಲೆ ದಾಳಿ ಮಾಡಲು ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ. ಆದರೆ ನಮ್ಮ ಸರ್ಕಾರ ಇತರ ದೇಶಗಳೆದುರು ತಲೆತಗ್ಗಿಸಲು ಬಿಡುವುದಿಲ್ಲ ಎಂದು ರಾಜ್'ನಾಥ್ ಸಿಂಗ್ ಪಾಕಿಸ್ತಾನದ ಹೆಸರು ಪ್ರಸ್ತಾಪಿಸದೇ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ದೇಶದ ನಿರಂತರ ಪ್ರಗತಿಯನ್ನು ಸಹಿಸದ ಕೆಲವು ದೇಶಗಳು ಹಿಂಬಾಗಿಲಿನ ಮೂಲಕ ಭಯೋತ್ಪಾದಕರನ್ನು ಭಾರತದ ಮೇಲೆ ಎತ್ತಿಕಟ್ಟುವ ಮೂಲಕ ದೇಶವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ.

ಉರಿಯಲ್ಲಿ ಹೇಡಿಗಳ ರೀತಿ ನಮ್ಮ ಸೈನಿಕರ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದರು. ಆದರೆ ನಮ್ಮ ಸೈನಿಕರು ಸರ್ಜಿಕಲ್ ದಾಳಿ ನಡೆಸುವ ಮೂಲಕ ತಕ್ಕ ಪ್ರತ್ಯುತ್ತರವನ್ನೇ ನೀಡಿದ್ದಾರೆ. ನಮ್ಮ ದೇಶ ಯಾವತ್ತಿಗೂ ಇತರರೆದುರು ತಲೆ ಕೆಳಗಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!