ಭಾರತದ ಗಡಿಗಳ ಇತಿಹಾಸ ಬರೆಯಲು ರಾಜನಾಥ್ ಸಿಂಗ್ ಅನುಮತಿ!

Published : Sep 18, 2019, 07:14 PM IST
ಭಾರತದ ಗಡಿಗಳ ಇತಿಹಾಸ ಬರೆಯಲು ರಾಜನಾಥ್ ಸಿಂಗ್ ಅನುಮತಿ!

ಸಾರಾಂಶ

ದೇಶದ ಗಡಿಗಳ ಇತಿಹಾಸ ಬರೆಯುವ ಕಾರ್ಯಕ್ಕೆ ಚಾಲನೆ| ಇತಿಹಾಸ ಬರೆಯುವ ಕಾರ್ಯಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮ್ಮತಿ| ಗಡಿಗಳ ಇತಿಹಾಸ ಹಾಗೂ ಕಾಲಕಾಲಕ್ಕೆ ಆದ ಬದಲಾವಣೆಗಳ ಕುರಿತು ಮಾಹಿತಿ ಸಂಗ್ರಹ| ಗಡಿ ಭಾಗದ ಜನಾಂಗೀಯತೆ ಹಾಗೂ ಸಂಸ್ಕೃತಿಯ ಇತಿಹಾಸ ಕೆದಕಲು ರಕ್ಷಣಾ ಇಲಾಖೆ ಸಜ್ಜು| ಮುಂದಿನ ಎರಡು ವರ್ಷಗಳಲ್ಲಿ ಕಾರ್ಯ ಸಾಧಿಸುವಂತೆ ಅಧಿಕಾರಿಗಳಿಗೆ ರಾಜನಾಥ್ ಸಿಂಗ್ ಸೂಚನೆ|

ನವದೆಹಲಿ(ಸೆ.18): ಮಹತ್ವದ ಬೆಳವಣಿಗೆಯೊಂದರಲ್ಲಿ ದೇಶದ ಗಡಿಗಳ ಇತಿಹಾಸ ಬರೆಯುವ ಕಾರ್ಯಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒಪ್ಪಿಗೆ ನೀಡಿದ್ದಾರೆ.

ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿ, ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ, ಗೃಹ ವ್ಯವಹಾರಗಳ ಸಚಿವಾಲಯ, ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ಸಚಿವಾಲಯದ ಸಭೆಯ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ.

ಭಾರತದ ಗಡಿಗಳ ಇತಿಹಾಸ, ಕಾಲಕಾಲಕ್ಕೆ ಅದರಲ್ಲಾದ ಬದಲಾವಣೆ, ಗಡಿ ನಿರ್ಮಾಣ, ಸ್ಥಳಾಂತರದಲ್ಲಿ ಭದ್ರತಾ ಪಡೆಗಳ ಪಾತ್ರಗಳ ಕುರಿತು ಮಾಹಿತಿ ಸಂಗ್ರಹಿಸಲಾಗುವುದು ಎಂದು ರಕ್ಷಣಾ ಇಲಾಖೆ ತಿಳಿಸಿದೆ.

ಗಡಿ ಭಾಗದ ಜನಾಂಗೀಯತೆ, ಸಂಸ್ಕೃತಿ ಹಾಗೂ ಕಾಲ ಕಾಲಕ್ಕೆ ಅದರಲ್ಲಾದ ಬದಲಾವಣೆಗಳು ಮತ್ತು ಪರಿಣಾಮಗಳು ಕುರಿತೂ ಸಂಶೋಧನೆ ನಡೆಯಲಿದ್ದು, ಮುಂದಿನ ಎರಡು ವರ್ಷಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ