ಕಾಶ್ಮೀರಿಗಳು ನಮ್ಮವರು, ನಮ್ಮೊಂದಿಗೆ ಇರಲಿದ್ದಾರೆ: ರಾಜನಾಥ್ ಸಿಂಗ್

Published : Mar 09, 2019, 08:43 PM IST
ಕಾಶ್ಮೀರಿಗಳು ನಮ್ಮವರು, ನಮ್ಮೊಂದಿಗೆ ಇರಲಿದ್ದಾರೆ: ರಾಜನಾಥ್ ಸಿಂಗ್

ಸಾರಾಂಶ

ಕಾಶ್ಮೀರಿಗಳು ಸದಾಕಾಲ ನಮ್ಮೊಂದಿಗೆ ಇರಲಿದ್ದಾರೆ ಎಂದ ಗೃಹ ಸಚಿವ| ಕಾಶ್ಮೀರಿಗಳು ನಮ್ಮವರೇ ಎಂದ ರಾಜನಾಥ್ ಸಿಂಗ್| ‘ಕಾಶ್ಮೀರಿ ಯುವಕರ ಮೇಲೆ ಹಲ್ಲೆ ನೋವು ತಂದಿದೆ’| ಕಾಶ್ಮೀರಿ ಜನಗಳ ರಕ್ಷಣೆಗಾಗಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮನವಿ|

ಬೆವಾರ್(ಮಾ.09): ಕಾಶ್ಮೀರಿಗಳು ನಮ್ಮವರಾಗಿದ್ದು, ಅವರು ನಮ್ಮೊಂದಿಗೆ ಸದಾಕಾಲ ಇರಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಬೀವರ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣಗಳು ನೋವು ತಂದಿವೆ ಎಂದು ಖೇದ ವ್ಯಕ್ತಪಡಿಸಿದರು. ಕಾಶ್ಮೀರಿಗಳು ನಮ್ಮವರಾಗಿದ್ದು, ಅವರು ನಮ್ಮೊಂದಿಗೆ ಇರಲಿದ್ದಾರೆ ಹಿಗಾಗಿ ಅವರನ್ನು ಗೌರವಿಸಿ ಎಂದು ರಾಜನಾಥ್ ಮನವಿ ಮಾಡಿದರು.

ಇದೇ ವೇಳೆ ಕಾಶ್ಮೀರಿ ಜನಗಳ ರಕ್ಷಣೆ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗುವುದು ಎಂದು ರಾಜನಾಥ್ ಸಿಂಗ್ ಭರವಸೆ ನೀಡಿದರು. ಪುಲ್ವಾಮಾ ದಾಳಿ ಬಳಿಕ ದೇಶದ ವಿವಿಧೆಡೆ ಕಾಶ್ಮೀರಿ ಯುವಕರ ಮೇಲೆ ಹಲ್ಲೆ ಪ್ರಕರಣಗಳು ಬೆಳಕಿಗೆ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ