ಕೇಂದ್ರ ಗೃಹ ಮಂತ್ರಿ ಪುತ್ರನಿಗೇ ಬೆದರಿಕೆ

Published : May 28, 2018, 06:29 PM IST
ಕೇಂದ್ರ ಗೃಹ ಮಂತ್ರಿ ಪುತ್ರನಿಗೇ ಬೆದರಿಕೆ

ಸಾರಾಂಶ

ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ಪುತ್ರನಿಗೆ ‘ಸುಲಿಗೆ‘ ಬೆದರಿಕೆ ಉತ್ತರ ಪ್ರದೇಶ ನೊಯ್ಡಾದ ಶಾಸಕರಾಗಿರುವ ಪಂಕಜ್ ಸಿಂಗ್

ನವದೆಹಲಿ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪುತ್ರನಿಗೆ ‘ಸುಲಿಗೆ’ ಬೆದರಿಕೆ ಬಂದಿದ್ದು, ನೊಯ್ಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಪ್ರದೇಶದ ನೊಯ್ಡಾದ ಶಾಸಕರಾಗಿರುವ ಪಂಕಜ್ ಸಿಂಗ್‌ಗೆ ಕಳೆದ ಕೆಲದಿನಗಳಿಂದ ವಾಟ್ಸಪ್ ಮೂಲಕ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ‘ಸುಲಿಗೆ’ ಬೆದರಿಕೆಗಳು ಬರುತ್ತಿವೆ ಎನ್ನಲಾಗಿದೆ. ಪಂಕಜ್ ಸಿಂಗ್ ಈ ಕುರಿತು ನೊಯ್ಡಾ ಸೆಕ್ಟರ್-20 ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಪ್ರಕರಣವನ್ನು ಸೈಬರ್ ಸೆಲ್‌ಗೆ ವರ್ಗಾಯಿಸಲಾಗಿದೆ. 

ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶದ ಹಲವಾರು ಬಿಜೆಪಿ ಶಾಸಕರು ಮತ್ತು ಇತರ ರಾಜಕಾರಣಿಗಳಿಗೆ ಇದೇ ರೀತಿಯಲ್ಲಿ ಬೆದರಿಕೆಗಳು ಬರುತ್ತಿವೆ. 3 ದಿನಗಳೊಳಗೆ 10 ಲಕ್ಷ ರೂ. ಕೊಡಬೇಕು, ಇಲ್ಲದಿದ್ದಲ್ಲಿ ಕುಟುಂಬ ಸದಸ್ಯರನ್ನು ಹತ್ಯೆಗೈಯಲಾಗುವುದು ಎಂಬ ಬೆದರಿಕೆ ಸಂದೇಶಗಳು ಬಂದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. 

ಬೆದರಿಕೆ ಪ್ರಕರಣಗಳ ತನಿಖೆಗಾಗಿ ಕಳೆದ ವಾರ ಉತ್ತರ ಪ್ರದೇಶ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. 12 ಶಾಸಕರಿಗೆ ಈಗಾಗಲೇ ಬೆದರಿಕೆಗಳು ಬಂದಿದ್ದು, ಭೂಗತ ಪಾತಕಿ ದಾವೂದ್‌ ಇಬ್ರಾಹಿಮ್ ಸಹಚರರ ಕೈವಾಡವಿದೆ ಎಂದು ಹೇಳಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA
ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ