ಎಲ್ಲ ರಾಜ್ಯದಲ್ಲಿರುವ ಕಾಶ್ಮೀರಿಗಳ ಬಗ್ಗೆ ಸುರಕ್ಷತೆ ವಹಿಸಿ

Published : Apr 21, 2017, 11:27 AM ISTUpdated : Apr 11, 2018, 12:34 PM IST
ಎಲ್ಲ ರಾಜ್ಯದಲ್ಲಿರುವ ಕಾಶ್ಮೀರಿಗಳ ಬಗ್ಗೆ ಸುರಕ್ಷತೆ ವಹಿಸಿ

ಸಾರಾಂಶ

ಕಾಶ್ಮೀರಿಗಳ ವಿರುದ್ಧ ನಡೆಯುತ್ತಿರುವ ಹಿಂಸೆಯನ್ನು ಖಂಡಿಸಿರುವ ಗೃಹ ಸಚಿವರು, ಅವರನ್ನು ಅನ್ಯರಂತೆ ಕಾಣದೆ ನಮ್ಮ ರಾಷ್ಟ್ರದ ಪ್ರಜೆಗಳಂತೆ ಪ್ರೀತಿಸಿ ಹೆಚ್ಚಿನ ತೊಂದರೆಯಾಗದಂತೆ ಎಚ್ಚರವಹಿಸಿ.ದೇಶದ ಕೆಲವು ಕಡೆ ಕಾಶ್ಮೀರಿಗಳ ವಿರುದ್ಧ ಅಹಿತಕರ ಘಟನೆಗಳು ನಡೆಯುತ್ತಿವೆ

ಬೆಂಗಳೂರು(ಏ.21): ದೇಶದ ವಿವಿಧ ಭಾಗದಲ್ಲಿ ನೆಲಸಿರುವ ಕಾಶ್ಮೀರಿಗಳ ಬಗ್ಗೆ ಸುರಕ್ಷತೆ ವಹಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮನವಿ ಮಾಡಿದ್ದಾರೆ.

ಕಾಶ್ಮೀರಿಗಳ ವಿರುದ್ಧ ನಡೆಯುತ್ತಿರುವ ಹಿಂಸೆಯನ್ನು ಖಂಡಿಸಿರುವ ಗೃಹ ಸಚಿವರು, ಅವರನ್ನು ಅನ್ಯರಂತೆ ಕಾಣದೆ ನಮ್ಮ ರಾಷ್ಟ್ರದ ಪ್ರಜೆಗಳಂತೆ ಪ್ರೀತಿಸಿ ಹೆಚ್ಚಿನ ತೊಂದರೆಯಾಗದಂತೆ ಎಚ್ಚರವಹಿಸಿ.ದೇಶದ ಕೆಲವು ಕಡೆ ಕಾಶ್ಮೀರಿಗಳ ವಿರುದ್ಧ ಅಹಿತಕರ ಘಟನೆಗಳು ನಡೆಯುತ್ತಿವೆ. ಅವರ ಬಗ್ಗೆ ನಿಗಾ ವಹಿಸುವಂತೆ ನಾನು ಎಲ್ಲ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ'ಎಂದು ನವದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕೆಲವು ದಿನಗಳ ಹಿಂದೆ ಉತ್ತರಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಕಾಶ್ಮೀರಿಗಳ ವಿರುದ್ಧ ಬೆದರಿಕೆ, ಕಲ್ಲು ಎಸೆತ ಪ್ರಕರಣಗಳು ನಡೆದಿದ್ದವು. ಅಲ್ಲದೆ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಸಿಬ್ಬಂದಿ ಅಲ್ಲಿನ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಗಳು ವರದಿಯಾಗಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!