ರಾಜ್ಯಸಭಾ ಚುನಾವಣೆಗೆ ಕೈನ ಮೂವರು ಕಣಕ್ಕೆ

Published : Mar 12, 2018, 07:20 AM ISTUpdated : Apr 11, 2018, 01:05 PM IST
ರಾಜ್ಯಸಭಾ ಚುನಾವಣೆಗೆ ಕೈನ ಮೂವರು ಕಣಕ್ಕೆ

ಸಾರಾಂಶ

ರಾಜ್ಯದಿಂದ ತೆರವಾಗಿರುವ 4 ಸ್ಥಾನಗಳಿಗೆ ಮಾ.23ರಂದು ನಡೆಯ ಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ 3 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ರಾತ್ರಿ ಬಿಡುಗಡೆ ಮಾಡಿದೆ.

ಬೆಂಗಳೂರು: ರಾಜ್ಯದಿಂದ ತೆರವಾಗಿರುವ 4 ಸ್ಥಾನಗಳಿಗೆ ಮಾ.23ರಂದು ನಡೆಯ ಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ 3 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ರಾತ್ರಿ ಬಿಡುಗಡೆ ಮಾಡಿದೆ.

ಅಲ್ಪಸಂಖ್ಯಾತ ಮೀಸಲಾತಿ ಕೋಟಾದಿಂದ ಹಾಗೂ ಹೈಕಮಾಂಡ್ ಪರವಾಗಿ ಡಾ.ಸಯ್ಯದ್ ನಸೀರ್ ಹುಸೇನ್, ದಲಿತ ಸಮುದಾಯದ ವತಿಯಿಂದ ಡಾ.ಎಲ್. ಹನುಮಂತಯ್ಯ ಹಾಗೂ ಒಕ್ಕಲಿಗ ಸಮುದಾಯದ ಜಿ.ಸಿ. ಚಂದ್ರಶೇಖರ್ ಅವರಿಗೆ ಟಿಕೆಟ್ ದೊರಕಿದೆ.

ಅಭ್ಯರ್ಥಿಗಳ ಆಯ್ಕೆಯಲ್ಲಿ ಹೈಕಮಾಂಡ್ ರಾಜ್ಯ ನಾಯಕರ ನಿರೀಕ್ಷೆ ಹುಸಿಗೊಳಿಸಿ ಹೊಸ ಮುಖಗಳಿಗೆ ಮಣೆ ಹಾಕುವ ಮೂಲಕ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ನಾಯಕರು ಸೂಚಿಸಿದ ಪಟ್ಟಿಯನ್ನು ಬದಿಗಿರಿಸಿ ರೇಸ್‌ನಲ್ಲಿ ಮುಂಚೂಣಿಯಲ್ಲಿರದ ಮುಖಗಳಿಗೆ ಟಿಕೆಟ್ ಘೋಷಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಪಿಜಿ ಕಟ್ಟದಲ್ಲಿ ಸಿಲಿಂಡರ್ ಸ್ಫೋಟ, ಎಂಜಿನೀಯರ್ ಸಾವು, ಮೂವರಿಗೆ ಗಾಯ
ಪ್ರೀತಿಸಿದ ಹುಡುಗಿ ಬೆನ್ನಲ್ಲೇ ಪೋಷಕರು ತೋರಿಸಿದಾಕೆ ಜೊತೆಗೂ ಮದುವೆ, ಮೃತ ಕತೆ ಕಟ್ಟಿ ತಗ್ಲಾಕೊಂಡ