
ನವದೆಹಲಿ(ಡಿ. 11) ಬಹುಚರ್ಚಿತ ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆಯ ನಂತರ ರಾಜ್ಯಸಭೆಯಲ್ಲಿಯೂ ಅಂಗೀಕಾರ ಸಿಕ್ಕಿದೆ. ಈ ಮೂಲಕ ಕಾನೂನಾಗಿ ಮಾರ್ಪಾಡುಗೊಳ್ಳಲು ಸಕಲ ಶಕ್ತಿ ಪಡೆದುಕೊಂಡಿದೆ.
"
ರಾಜ್ಯಸಭೆಯಲ್ಲಿ ಮಸೂದೆಗೆ ಅಂಗೀಕಾರ ದೊರೆತಿದ್ದು ಡಿಸೆಂಬರ್ 11 ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಮೇಲ್ಮನೆಯಲ್ಲಿ ಗೃಹ ಸಚಿವ ಅಮಿತ್ ಶಾ ಮಸೂದೆ ಮಂಡಿಸಿದ್ದರು. ಸುದೀರ್ಘ ಚರ್ಚೆಯ ನಂತರ ಸದನದ ಸಭಾಧ್ಯಕ್ಷರಾದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಸೂದೆಯನ್ನು ಮತಕ್ಕೆ ಹಾಕಿದರು.
ಪೌರತ್ವ ತಿದ್ದುಪಡಿ ಮಸೂದೆ ಎಂದರೇನು? ಯಾರಿಗೆ ಲಾಭ ಯಾರಿಗೆ ನಷ್ಟ?
ರಾಜ್ಯಸಭೆಯಲ್ಲಿ ವಿಧೇಯಕದ ಪರವಾಗಿ 125 ಮತಗಳು ಬಂದರೆ, ವಿರುದ್ಧವಾಗಿ 105 ಮತಗಳು ಚಲಾವಣೆಯಾದವು. ಸದನದ ಒಳಗೆ ಈ ಎಲ್ಲ ಘಟನಾವಳಿಗಳು ನಡೆಯುತ್ತಿದ್ದರೆ ಹೊರಗೆ ಮಾತ್ರ ಪರ-ವಿರೋಧದ ಚರ್ಚೆ ಜೋರಾಗಿದೆ. ಇದು ಅಲ್ಪಸಂಖ್ಯಾತರ ವಿರೋಧಿ ಕಾನೂನು ಎಂದು ಹಲವರು ಬಣ್ಣಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.