
ನವದೆಹಲಿ (ಡಿ.14): ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ 2014 ರಲ್ಲಿ ಸಲ್ಲಿಸಿದ್ದ ವಿಕಲಾಂಗ ವ್ಯಕ್ತಿಗಳ ಹಕ್ಕು ಮಸೂದೆಯನ್ನು ರಾಜ್ಯಸಭೆ ಇಂದು ಅಂಗೀಕರಿಸಿದೆ.
ಸದನದ ಶೂನ್ಯ ವೇಳೆಯಲ್ಲಿ ಈ ಮಸೂದೆಯನ್ನು ಅಂಗೀಕರಿಸಲಾಗಿದೆ. ವಿಕಲ ಚೇತನರ ಭದ್ರತೆ ಹಾಗೂ ಹಕ್ಕುಗಳನ್ನು ಇನ್ನಷ್ಟು ಬಲಪಡಿಸುವುದು ಈ ಮಸೂದೆಯ ಉದ್ದೇಶವಾಗಿದೆ. ಅಂತಹ ವ್ಯಕ್ತಿಗಳಿಗೆ ತಾರತಮ್ಯ ತೋರಿದರೆ 2 ವರ್ಷ ಜೈಲು
ಶಿಕ್ಷೆ ಮತ್ತು ಗರಿಷ್ಟ 5 ಲಕ್ಷದವರೆಗೆ ದಂಡವನ್ನು ವಿಧಿಸಲಾಗುವುದು ಎಂದು ಈ ಮಸೂದೆಯಲ್ಲಿ ಹೇಳಲಾಗಿದೆ. ಈ ಮಸೂದೆಗೆ 120 ತಿದ್ದುಪಡಿಯನ್ನು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.