
ಮಡಿಕೇರಿ(ಜು.02): ಕನ್ನಡದ ಉದಯೋನ್ಮುಕ ನಟ ರಕ್ಷಿತ್ ಶೆಟ್ಟಿ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರ ನಿಶ್ಚತಾರ್ಥ ಸಮಾರಂಭ ನಾಳೆ (ಜು.03) ಸಂಜೆ ವಿರಾಜಪೇಟೆಯಲ್ಲಿರುವ ಮಂದಣ್ಣ ಅವರ ಮಾಲೀಕತ್ವದ ಸೆರೆನಿಟಿ ಹಾಲ್'ನಲ್ಲಿ ನಡೆಯಲ್ಲಿದೆ. ನಿಶ್ಚಿತಾರ್ಥದಲ್ಲಿ 1500 ಮಂದಿ ಆಹ್ವಾನಿತರು ಭಾಗವಹಿಸುವ ನಿರೀಕ್ಷೆಯಿದೆ. ಹಲವು ಮಂದಿ ಸಿನಿಮಾ ದಿಗ್ಗಜರು, ಜನಪ್ರತಿನಿಧಿಗಳು ಕೂಡ ಪಾಲ್ಗೊಳ್ಳಲಿದ್ದಾರೆ. ರಕ್ಷಿತ್ ಶೆಟ್ಟಿ ಕುಟುಂಬಸ್ಥರು ಉಡುಪಿಯಿಂದ ಭಾನುವಾರವೇ ವೀರಾಜಪೇಟೆಗೆ ಆಗಮಿಸಲಿದ್ದಾರೆ. ರಕ್ಷಿತ್ ಶೆಟ್ಟಿ ಕೆಲವು ದಿನಗಳಿಂದ ವಿರಾಜಪೇಟೆಯಲ್ಲಿಯೇ ತಂಗಿದ್ದು ನಿಶ್ಚಿತಾರ್ಥ ಕಾರ್ಯಕ್ರಮದ ಸಿದ್ಧತೆ ನೋಡಿಕೊಳ್ಳುತ್ತಿದ್ದಾರೆ. ಪ್ರಸ್ತುತ ರಶ್ವಿಕಾ ಮಂದಣ್ಣ ದುಬೈನಲ್ಲಿ ಶೂಟಿಂಗ್'ನಲ್ಲಿದ್ದು, ಭಾನುವಾರ ರಾತ್ರಿ ವಿರಾಜಪೇಟೆಗೆ ಆಗಮಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.