ಹೃದಯ ಹಿಂಡುವಂತೆ ನೋವು ತೋಡಿಕೊಂಡರು ರಾಮ್ ಗೋಪಾಲ್ ವರ್ಮಾ

Published : Feb 25, 2018, 08:09 PM ISTUpdated : Apr 11, 2018, 12:54 PM IST
ಹೃದಯ ಹಿಂಡುವಂತೆ ನೋವು ತೋಡಿಕೊಂಡರು ರಾಮ್ ಗೋಪಾಲ್ ವರ್ಮಾ

ಸಾರಾಂಶ

ದುಬೈನಲ್ಲಿ ಮದುವೆ ಸಮಾರಂಭಕ್ಕೆ ತೆರಳಿದ್ದ ವೇಳೆ  ಹೃದಯಾಘಾತದಿಂದಾದ ಶ್ರೀ ದೇವಿ ಸಾವು ಎಲ್ಲರಿಗೂ ಆಘಾತವನ್ನುಂಟು ಮಾಡಿದೆ.

ಮುಂಬೈ : ದುಬೈನಲ್ಲಿ ಮದುವೆ ಸಮಾರಂಭಕ್ಕೆ ತೆರಳಿದ್ದ ವೇಳೆ  ಹೃದಯಾಘಾತದಿಂದಾದ ಶ್ರೀ ದೇವಿ ಸಾವು ಎಲ್ಲರಿಗೂ ಆಘಾತವನ್ನುಂಟು ಮಾಡಿದೆ.

ಇದೇ ವೇಳೆ ರಾಮ್ ಗೋಪಾಲ್ ವರ್ಮಾ ಶ್ರೀ ದೇವಿ ನಿಧನಕ್ಕೆ ಅತೀವ ದುಃಖವನ್ನು ತೋಡಿಕೊಂಡಿದ್ದಾರೆ. ನಿಜವಾಗಿಯೂ ಶ್ರೀ ದೇವಿ ಸತ್ತಿದ್ದಾಳೆಯೇ. ಯಾರಾದರು ನನ್ನನ್ನು ಎಚ್ಚರಿಸಿ ಇದೊಂದು ಕೆಟ್ಟ ಕನಸು ಎಂದು ಹೇಳಬಾರದೇ ಎಂದು ಅವರು ಹೇಳಿಕೊಂಡಿದ್ದಾರೆ.

ರಾತ್ರಿ ಎಚ್ಚರವಾದಾಗ ಕೆಲವರಿಗೆ ತಮ್ಮ ಫೋನ್ ನೋಡುವ ಅಭ್ಯಾಸವಿರುತ್ತದೆ. ಅದರಂತೆ ನನಗೂ ಕೂಡ ಅದೇ ರೀತಿಯಾದ ಅಭ್ಯಾಸವಿದ್ದು, ಈ ಸಂದೇಶವನ್ನು ನೋಡಿದೆ. ಆಗ ನನಗೆ ಅನಿಸಿದ್ದು,ಇದೊಂದು ಕೆಟ್ಟ ಕನಸೆಂದು.  ನಂತರ ಮತ್ತೆ ನಾನು ನಿದ್ದೆಗೆ ಜಾರಿದೆ.

ಬಳಿಕ ನಾನು ಎಚ್ಚರವಾದಾಗ ಮತ್ತೆ ಮೊಬೈಲ್ ನೋಡಿದಾಗ ಸುಮಾರು 50 ಮಂದಿ ನನಗೆ ಈ ಬಗ್ಗೆ ಸಂದೇಶವನ್ನು ಕಳಿಸಿದ್ದರು ಎಂದು ಹೇಳಿದ್ದಾರೆ.

ಅಲ್ಲದೇ ಆಕೆಯನ್ನು ಕರೆದುಕೊಂಡು ಹೋದ ದೇವರನ್ನು ನಾನು ಧ್ವೇಷಿಸುತ್ತೇನೆ. ಇಷ್ಟು ಬೇಗ ಕರೆದೊಯ್ದ ಆಕೆಯ ಸಾವನ್ನು ಕೂಡ ಧ್ವೇಷಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಗುಲಗಳಿಗೆ ಸಬ್ಸಿಡಿ ದರದಲ್ಲಿ ಟಿಟಿಡಿ ಮೈಕ್‌, ವಿಗ್ರಹ
ಎಪ್ಸ್ಟೀನ್‌ ಸೆ* ಫೈಲ್‌ಗಳಲ್ಲಿ ಕ್ಲಿಂಟನ್‌, ಜಾಕ್ಸನ್‌ ಫೋಟೋ