ರಾಮಮಂದಿರ ಶಾಸನಕ್ಕೆ ವಿಎಚ್‌ಪಿ ಪಟ್ಟು

Published : Jan 03, 2019, 08:49 AM IST
ರಾಮಮಂದಿರ ಶಾಸನಕ್ಕೆ ವಿಎಚ್‌ಪಿ ಪಟ್ಟು

ಸಾರಾಂಶ

ರಾಮಮಂದಿರ ನಿರ್ಮಾಣಕ್ಕೆ ವಿಎಚ್‌ಪಿ ಪಟ್ಟು | ರಾಮಮಂದಿರ ವಿಚಾರವಾಗಿ ಸುಗ್ರೀವಾಜ್ಞೆ ಸದ್ಯಕ್ಕಿಲ್ಲ ಎಂಬ ಮೋದಿ ಹೇಳಿಕೆಗೆ ವಿಚ್‌ಪಿ ಅಸಮಾಧಾನ | 

ನವದೆಹಲಿ (ಜ. 03): ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು, ‘ಸುಗ್ರೀವಾಜ್ಞೆ ಈಗಿಲ್ಲ’ ಎಂದು ನೀಡಿರುವ ಹೇಳಿಕೆಗೆ ವಿಶ್ವ ಹಿಂದೂ ಪರಿಷತ್ತು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಮಂದಿರ ನಿರ್ಮಾಣಕ್ಕಾಗಿ ಸರ್ಕಾರವು ಕೋರ್ಟ್ ತೀರ್ಮಾನಕ್ಕೆ ಕಾಯದೇ ಕೂಡಲೇ ಶಾಸನ ಜಾರಿಗೆ ತರಬೇಕು ಎಂದು ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ವಿಶ್ವ ಹಿಂದೂ ಪರಿಷತ್ತು
ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಆಲೋಕ್ ಕುಮಾರ್, ‘ಕೋರ್ಟ್ ತೀರ್ಮಾನ ಪ್ರಕಟವಾಗುವ ತನಕ ಹಿಂದೂ ಸಮಾಜಕ್ಕೆ ಕಾಯಲಾಗದು. ಶಾಸನ ರಚನೆಯೊಂದೇ ಸೂಕ್ತ ನಿರ್ಧಾರವಾಗುತ್ತದೆ. ಅಧ್ಯಾದೇಶದ ಸಮಯವನ್ನು ಬದಲಿಸಿಕೊಳ್ಳುವಂತೆ ಮೋದಿ ಅವರ ಮನವೊಲಿಸಲಿದ್ದೇವೆ’ ಎಂದು ಹೇಳಿದರು.

ಈ ನಡುವೆ ನಾಗಪುರದಲ್ಲಿ ಮಾತನಾಡಿದ ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್, ‘ಅಯೋಧ್ಯೆಯಲ್ಲಿ ಮಂದಿರವೊಂದೇ ನಿರ್ಮಾಣ ಆಗಲಿದೆ’ ಎಂದರು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ