ಮಾಜಿ ಉ.ಪ್ರ. ಸಿಎಂ ರಾಮನರೇಶ್ ಯಾದವ್ ನಿಧನ

Published : Nov 22, 2016, 06:45 AM ISTUpdated : Apr 11, 2018, 12:54 PM IST
ಮಾಜಿ ಉ.ಪ್ರ. ಸಿಎಂ ರಾಮನರೇಶ್ ಯಾದವ್ ನಿಧನ

ಸಾರಾಂಶ

ಕಾಂಗ್ರೆಸ್ಸಿಗೆ ಸೇರುವ ಮುನ್ನ ಜನತಾ ಪರಿವಾರದ ಮುಖಂಡರಾಗಿದ್ದ ರಾಮನರೇಶ್ ಯಾದವ್ 1977-79 ಅವಧಿಯಲ್ಲಿ ಉತ್ತರ ಪ್ರದೇಶದ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು.

ಲಕ್ನೋ(ನ. 22): ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಉತ್ತರಪ್ರದೇಶ ಮುಖ್ಯಮಂತ್ರಿ ರಾಮನರೇಶ್ ಯಾದವ್ ನಿಧನರಾದರು. ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಯಾದವ್(90) ಮಂಗಳವಾರ ಇಲ್ಲಿಯ ಪಿಜಿಐ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಹಲವು ಗಣ್ಯರು ರಾಮನರೇಶ್ ಯಾದವ್ ನಿಧನಕ್ಕೆ ಸಂತಾಪ ಸೂಚಿಸಿದರು.

ಕಾಂಗ್ರೆಸ್ಸಿಗೆ ಸೇರುವ ಮುನ್ನ ಜನತಾ ಪರಿವಾರದ ಮುಖಂಡರಾಗಿದ್ದ ರಾಮನರೇಶ್ ಯಾದವ್ 1977-79 ಅವಧಿಯಲ್ಲಿ ಉತ್ತರ ಪ್ರದೇಶದ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. 2004ರಲ್ಲಿ ಕಾಂಗ್ರೆಸ್'ಗೆ ಪಕ್ಷಾಂತರಗೊಂಡ ಅವರು ಚುನಾವಣೆಯಲ್ಲಿ ಸೋಲನುಭವಿಸಿದರು. 2011ರಲ್ಲಿ ಯುಪಿಎ ಸರಕಾರವು ಈ ಹಿರಿಯ ಮುಖಂಡರನ್ನು ಮಧ್ಯಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?
ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?