ಅಯೋಧ್ಯೆಯಿಂದ ಕರ್ನಾಟಕಕ್ಕೆ ಹೊರಟಿತು ರಾಮರಾಜ್ಯ ರಥ

Published : Feb 14, 2018, 07:25 AM ISTUpdated : Apr 11, 2018, 01:07 PM IST
ಅಯೋಧ್ಯೆಯಿಂದ ಕರ್ನಾಟಕಕ್ಕೆ ಹೊರಟಿತು ರಾಮರಾಜ್ಯ ರಥ

ಸಾರಾಂಶ

1990ರಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್‌.ಕೆ. ಅಡ್ವಾಣಿ ಅವರು ರಥಯಾತ್ರೆ ನಡೆಸಿದ ರೀತಿಯಲ್ಲೇ, ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಿಜೆಪಿ ಮುಖಂಡರು, ಅರ್ಚಕರು ಸೇರಿದಂತೆ ಇತರರು ಜೈ ರಾಮ್‌ ಮಂತ್ರಘೋಷಗಳ ಮೂಲಕ ರಾಮರಾಜ್ಯ ರಥಯಾತ್ರೆಗೆ ಮಂಗಳವಾರ ಚಾಲನೆ ದೊರೆಯಿತು.

ಲಖನೌ: 1990ರಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್‌.ಕೆ. ಅಡ್ವಾಣಿ ಅವರು ರಥಯಾತ್ರೆ ನಡೆಸಿದ ರೀತಿಯಲ್ಲೇ, ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಿಜೆಪಿ ಮುಖಂಡರು, ಅರ್ಚಕರು ಸೇರಿದಂತೆ ಇತರರು ಜೈ ರಾಮ್‌ ಮಂತ್ರಘೋಷಗಳ ಮೂಲಕ ರಾಮರಾಜ್ಯ ರಥಯಾತ್ರೆಗೆ ಮಂಗಳವಾರ ಚಾಲನೆ ದೊರೆಯಿತು. 41 ದಿನಗಳ ಈ ರಥಯಾತ್ರೆಯು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯಲಿದೆ.

ಅಲ್ಲದೆ, ವರ್ಷ ವಿಧಾನಸಭೆ ಚುನಾವಣೆ ಎದುರಾಗಲಿರುವ ಕರ್ನಾಟಕ ಸೇರಿದಂತೆ ಒಟ್ಟು 6 ರಾಜ್ಯಗಳಲ್ಲಿ ಹಾದು ಹೋಗಿ, ಕೊನೆಗೆ ತಮಿಳುನಾಡಿನ ರಾಮೇಶ್ವರಂನಲ್ಲಿ ರಥಯಾತ್ರೆ ಅಂತ್ಯಗೊಳ್ಳಲಿದೆ ಎಂದು ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಹಿಂದೂ ಮತಗಳನ್ನು ಕ್ರೋಢೀಕರಿಸುವ ಹುನ್ನಾರವಿದು ಎಂದು ರಥಯಾತ್ರೆ ಬಗ್ಗೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಆದರೆ, ಈ ಆರೋಪವನ್ನು ಅಲ್ಲಗೆಳೆದಿರುವ ಬಿಜೆಪಿ, ಇದೊಂದು ಖಾಸಗಿ ಕಾರ್ಯಕ್ರಮವಾಗಿದ್ದು, ರಾಮ ಮಂದಿರ ನಿರ್ಮಾಣದ ಕುರಿತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮತ್ತು ಜನ ಸಾಮಾನ್ಯರು ರಾಮ ಮಂದಿರ ನಿರ್ಮಿಸುವ ಪ್ರತಿಜ್ಞೆ ಕೈಗೊಳ್ಳಲಿದ್ದಾರೆ ಎಂದು ಹೇಳಿದೆ.

1990ರಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್‌.ಕೆ. ಅಡ್ವಾಣಿ ಅವರು ರಥಯಾತ್ರೆ ಕೈಗೊಂಡಿದ್ದರು. ಆದರೆ, ಅದನ್ನು ಅಂದಿನ ಬಿಹಾರ ಮುಖ್ಯಮಂತ್ರಿಯಾಗಿದ್ದ ಲಾಲು ಪ್ರಸಾದ್‌ ಯಾದವ್‌ ಸರ್ಕಾರ ತಡೆದಿತ್ತು. ಅಲ್ಲದೆ, ಅಡ್ವಾಣಿ ಅವರನ್ನು ಬಂಧಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌