
ನವದೆಹಲಿ (ಜೂ.01): ಇತಿಹಾಸಕಾರ, ಲೇಖಕ ರಾಮಚಂದ್ರ ಗುಹಾ ಬಿಸಿಸಿಐ ಆಡಳಿತ ಅಧಿಕಾರಿಗಳ ಮಂಡಳಿಗೆ ಇಂದು ರಾಜಿನಾಮೆ ನೀಡಿದ್ದಾರೆ. ರಾಮಚಂದ್ರ ಗುಹಾರವರು ಈ ವರ್ಷ ಜನವರಿಯಲ್ಲಿ ಬಿಸಿಸಿಐ ಆಡಳಿತ ಅಧಿಕಾರಿಗಳ ಮಂಡಳಿಗೆ ಸುಪ್ರೀಂಕೋರ್ಟ್'ನಿಂದ ಆಯ್ಕೆಯಾಗಿದ್ದರು.
ವೈಯಕ್ತಿಕ ಕಾರಣದಿಂದ ರಾಜಿನಾಮೆ ನೀಡಿರುವುದಾಗಿ ಗುಹಾರವರು ಸುಪ್ರೀಂಕೋರ್ಟ್ ಗೆ ತಿಳಿಸಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಬಿಸಿಸಿಐಗೆ ನೂತನ ಆಡಳಿತ ಅಧಿಕಾರಿಗಳ ಮಂಡಳಿಯನ್ನು ಸುಪ್ರೀಂಕೋರ್ಟ್ ನೇಮಿಸಿತ್ತು. ಇದರಲ್ಲಿ ಇತಿಹಾಸಕಾರ ರಾಮಚಂದ್ರ ಗುಹಾ, ವಿನೋದ್ ರೈ, ಮಾಜಿ ಮಹಿಳಾ ಕ್ರಿಕೆಟರ್ ಡೈನಾ ಎದುಲ್ಜಿ ಮತ್ತು ವಿಕ್ಮ್ ಲಿಮಾಯೇ ಆಯ್ಕೆಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.