ಈಶ್ವರಪ್ಪಗೆ ರಾಮಲಾಲ್ ಖಡಕ್ ತಾಕೀತು

Published : Oct 06, 2016, 09:14 AM ISTUpdated : Apr 11, 2018, 12:55 PM IST
ಈಶ್ವರಪ್ಪಗೆ ರಾಮಲಾಲ್ ಖಡಕ್ ತಾಕೀತು

ಸಾರಾಂಶ

ಪಕ್ಷದ ವೇದಿಕೆ ಬಿಟ್ಟು ಪ್ರತ್ಯೇಕ ಸಂಘಟನೆ ಮಾಡದಂತೆ ರಾಮಲಾಲ್ ಈಶ್ವರಪ್ಪ ಸೇರಿದಂತೆ ಎಲ್ಲ ನಾಯಕರಿಗೂ ತಾಕೀತು ಮಾಡಿದ್ದಾರೆ.

ಬೆಂಗಳೂರು(ಅ.06): ರಾಯಣ್ಣ ಬ್ರಿಗೇಡ್ ಕಟ್ಟಿ ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಪ್ರತ್ಯೇಕ ಸಂಘಟನೆ ಕೈಬಿಡುವಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್ ಕೋರ್ ಕಮಿಟಿ ಸಭೆಯಲ್ಲಿ ಖಡಕ್ ಸಂದೇಶ ನೀಡಿದ್ದಾರೆ. ಆದರೆ, ಏಕಾಏಕಿ ರಾಯಣ್ಣ ಬ್ರಿಗೇಡ್ ಕೈಬಿಟ್ಟರೆ ತಪ್ಪು ಸಂದೇಶ ರವಾನೆಯಾಗುತ್ತೆ ಎಂದು ಈಶ್ವರಪ್ಪ ತಿಳಿಸಿದ್ದಾರೆ. ಹೀಗಾಗಿ, ಈಶ್ವರಪ್ಪಗೆ  ಸಮಯ ನೀಡಿದ ರಾಮಲಾಲ್ ಕ್ರಮೇಣ ರಾಯಣ್ಣ ಬ್ರಿಗೇಡ್ ಕೈಬಿಡುವಂತೆ ಸೂಚಿಸಿದ್ದಾರೆ.

ಇದೇವೇಳೆ, ಶಿವಮೊಗ್ಗ ಟಿಕೆಟ್ ಖಾತರಿ ಬಗ್ಗೆ ಈಶ್ವರಪ್ಪ ಪ್ರಸ್ತಾಪಿಸಿದ್ದು, ಸಮೀಕ್ಷೆ ನಡೆಸಿ ಟಿಕೆಟ್ ನೀಡುವುದಾಗಿ ರಾಮಲಾಲ್ ತಿಳಿಸಿದ್ಧಾರೆ ಎಂದು ತಿಳಿದುಬಂದಿದೆ. ಹಾಗಿದ್ದರೆ, ಎಲ್ಲರಿಗೂ ಸಮೀಕ್ಷೆ ನಡೆಸಿಯೇ ಟಿಕೆಟ್ ನೀಡಿ ಎಂದ ಈಶ್ವರಪ್ಪ ತೀವ್ರ ಅಸಮಾಧಾನದಿಂದ ತೆರಳಿದ್ದಾರೆ.

ಪಕ್ಷದ ವೇದಿಕೆ ಬಿಟ್ಟು ಪ್ರತ್ಯೇಕ ಸಂಘಟನೆ ಮಾಡದಂತೆ ರಾಮಲಾಲ್ ಈಶ್ವರಪ್ಪ ಸೇರಿದಂತೆ ಎಲ್ಲ ನಾಯಕರಿಗೂ ತಾಕೀತು ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಂದ್ಯಾವಳಿಗೆ ಚಿನ್ನಸ್ವಾಮಿ ಸ್ಟೇಡಿಯಂ ಪೂರಕವಾಗಿಲ್ಲ: ಸರ್ಕಾರದ ಸಮಿತಿ ಶಿಫಾರಸು
ಪ್ರಿಯಾಂಕಾ ಗಾಂಧಿ ಕೈ ಪ್ರಧಾನಿ ಅಭ್ಯರ್ಥಿ ಆಗಲು ಭಾರಿ ಒತ್ತಡ: ಪತಿ ರಾಬರ್ಟ್‌ ಸ್ಫೋಟಕ ನುಡಿ