'ಪಕ್ಕದಲ್ಲೇ ಯಡಿಯೂರಪ್ಪರನ್ನು ಕೂರಿಸಿ ಮೋದಿ ಭ್ರಷ್ಟಾಚಾರದ ಬಗ್ಗೆ ಮಾತು!'

Published : Feb 04, 2018, 10:05 PM ISTUpdated : Apr 11, 2018, 12:49 PM IST
'ಪಕ್ಕದಲ್ಲೇ ಯಡಿಯೂರಪ್ಪರನ್ನು ಕೂರಿಸಿ ಮೋದಿ ಭ್ರಷ್ಟಾಚಾರದ ಬಗ್ಗೆ ಮಾತು!'

ಸಾರಾಂಶ

ರಾಜ್ಯ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರೋಪದಲ್ಲಿ ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಮಾಡಿರುವ ಟೀಕೆಗಳಿಗೆ ಗೃಹ ಸಚಿವ ರಾಮಲಿಂಗ ರೆಡ್ಡಿ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ರಾಜ್ಯ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರೋಪದಲ್ಲಿ ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಮಾಡಿರುವ ಟೀಕೆಗಳಿಗೆ ಗೃಹ ಸಚಿವ ರಾಮಲಿಂಗ ರೆಡ್ಡಿ ತಿರುಗೇಟು ನೀಡಿದ್ದಾರೆ.

‘ಮೋದಿಯವರಿಗೆ ಆ ರೀತಿ ಮಾತನಾಡುವುದಕ್ಕೆ ನಾಚಿಕೆಯಾಗಬೇಕು, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅಪರಾಧ ಪ್ರಮಾಣ ಬಹಳ ಹೆಚ್ಚಾಗಿದೆ. ಪಕ್ಕದಲ್ಲೇ ಯಡಿಯೂರಪ್ಪರನ್ನು ಕೂರಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ, ಎಂದು ರಾಮಲಿಂಗ ರೆಡ್ಡಿ ವ್ಯಂಗ್ಯವಾಡಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆ ದೇಶದಲ್ಲೇ ಉತ್ತಮವಾಗಿದೆ ಎಂದು ಹೇಳಿದ ರೆಡ್ಡಿ, ಬಿಜೆಪಿಯ ಅಧ್ಯಕ್ಷರೇ ಬಂದು ಗಲಾಟೆ ಮಾಡಿ ಎಂದು ಹೇಳುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಮೋದಿಯವರು 12 ವರ್ಷ ಗುಜರಾತಿನ ಮುಖ್ಯಮಂತ್ರಿಯಾಗಿದ್ದರು, ಅವರ ಆಡಳಿತಾವಧಿಯಲ್ಲಿ ಎರಡು ಸಾವಿರ ಕೊಲೆಗಳಾಯಿತು, ಕೊರೆಗಾಂವ್’ನಲ್ಲಿ, ರಾಮ್ ರಹೀಂ ಗಲಭೆಗಳಲ್ಲಿ ಕಗ್ಗೊಲೆಗಳಾಯಿತು. ಅದೇನಾ ಆಡಳಿತ? ಎಂದು ರಾಮಲಿಂಗ ರೆಡ್ಡಿ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ಅಪರಾಧ ಬಹಳ ಹೆಚ್ಚಾಗಿದ್ದು, ‘ಈಸ್ ಆಫ್ ಡೂಯಿಂಗ್ ಮರ್ಡರ್’ ಸನ್ನಿವೇಶವಿದೆ, ರಾಜ್ಯವು ಅಪರಾಧಗಳ ಸ್ವರ್ಗವಾಗಿದೆ, ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಳವಳ್ಳಿಗೆ ಆಗಮನ ನಿರೀಕ್ಷೆ
ಧಾರವಾಡ: ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಭೇಟಿ ಮಾಡಿಸಲು ಹೈಕೋರ್ಟ್ ಸೂಚನೆ