ಕಾಂಗ್ರೆಸ್ ಬೆಂಬಲಿಸುತ್ತೋ, ಬಿಡುತ್ತೋ ಗೋ ಹತ್ಯೆ ನಿಷೇಧವನ್ನ ನಾನು ಬೆಂಬಲಿಸುತ್ತೇನೆ: ರಾಮಲಿಂಗಾ ರೆಡ್ಡಿ

Published : Mar 31, 2018, 01:48 PM ISTUpdated : Apr 11, 2018, 12:56 PM IST
ಕಾಂಗ್ರೆಸ್ ಬೆಂಬಲಿಸುತ್ತೋ, ಬಿಡುತ್ತೋ ಗೋ ಹತ್ಯೆ ನಿಷೇಧವನ್ನ ನಾನು ಬೆಂಬಲಿಸುತ್ತೇನೆ: ರಾಮಲಿಂಗಾ ರೆಡ್ಡಿ

ಸಾರಾಂಶ

ಬಿಜೆಪಿ ಅಶ್ವಮೇಧ ಯಾಗವನ್ನು ರಾಜ್ಯದಲ್ಲಿ ಕಟ್ಟಿ ಹಾಕುತ್ತೇವೆ. ರಾಜ್ಯಕ್ಕೆ ಬಿಜೆಪಿ ಕೊಡುಗೆ ಏನು ಎಂಬುದನ್ನು ಮುಂದಿನ ದಿನಗಳಲ್ಲೂ ಬಿಚ್ಚಿಡುತ್ತೇವೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. 

ಬೆಂಗಳೂರು (ಮಾ. 31):  ಬಿಜೆಪಿ ಅಶ್ವಮೇಧ ಯಾಗವನ್ನು ರಾಜ್ಯದಲ್ಲಿ ಕಟ್ಟಿ ಹಾಕುತ್ತೇವೆ. ರಾಜ್ಯಕ್ಕೆ ಬಿಜೆಪಿ ಕೊಡುಗೆ ಏನು ಎಂಬುದನ್ನು ಮುಂದಿನ ದಿನಗಳಲ್ಲೂ ಬಿಚ್ಚಿಡುತ್ತೇವೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. 

ಆರ್.ಎಸ್.ಎಸ್. ಕಾರ್ಯಕರ್ತರನ್ನು ಕೊಂದವರು  ಈಗಾಗಲೇ ಶಿಕ್ಷೆಗೆ ಗುರಿಯಾಗಿದ್ದಾರೆ. ಆದರೂ ಆರೋಪಿಗಳು ಪಾತಾಳದಲ್ಲಿದ್ದರೂ ಹಿಡಿದು ಜೈಲಿಗೆ ಹಾಕುತ್ತೇವೆ ಎನ್ನುತ್ತಿದ್ದಾರೆ. ಜೈಲಿಗೆ ಹಾಕೋಕೆ ಇವರ್ಯಾರು?   22 ಜನರನ್ನ ಸಂಘಪರಿವಾರದವರು  ಕೊಂದಿದ್ದಾರೆ.  ಈ ಬಗ್ಗೆ  ಮೋದಿ  ಅಮಿತ್ ಶಾ ಚಕಾರ ಎತ್ತಿಲ್ಲ ಎಂದಿದ್ದಾರೆ. 

ಗೋ  ಹತ್ಯೆ ನಿಷೇಧಕ್ಕೆ ನನ್ನ ವೈಯಕ್ತಿಕ ಬೆಂಬಲ ಇದೆ.   ಕಾಂಗ್ರೆಸ್ ಬೆಂಬಲಿಸುತ್ತೋ ಬಿಡುತ್ತೋ  ಗೋ ಹತ್ಯೆ ನಿಷೇಧವನ್ನ ನಾನು ಬೆಂಬಲಿಸುತ್ತೇನೆ.  ಗೋವುಗಳ ಮೇಲೆ ನನಗೆ ಪ್ರೀತಿ ಇದೆ.  ಗೋ ಹತ್ಯೆ ನಿಲ್ಲಬೇಕು.  ಬಿಜೆಪಿ ಗೋ ಹತ್ಯೆ ನಿಲ್ಲಿಸಲಿ. ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾರೆ.  ಗೋ ಮಾಂಸ ರಫ್ತಿಗೆ ನಿಷೇಧ ಹೇರಲಿ.  ತನ್ನಿಂದ ತಾನೇ ಗೋ ಹತ್ಯೆ ಕಡಿಮೆ ಆಗಲಿದೆ. ಶೇ  75 ರಷ್ಟು ಗೋ ಹತ್ಯೆ ನಿಲ್ಲಲಿದೆ ಎಂದಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿ20 ವಿಶ್ವಕಪ್‌ನಿಂದ ಗೇಟ್‌ಪಾಸ್ ಪಡೆದ ಬಾಂಗ್ಲಾದೇಶಕ್ಕೆ ಆಗುವ ನಷ್ಟವೆಷ್ಟು? ಭಾರತ ಕಳೆದುಕೊಳ್ಳೋದೇಷ್ಟು?
ಸರ್ಪದೋಷ ಪರಿಹಾರಕ್ಕೆ 'ಹಾವಿನಂತೆ ಹುಟ್ಟಿದ್ದ' 7 ತಿಂಗಳ ಮಗಳನ್ನು ಕೊಂದಿದ್ದ ಅಮ್ಮ, ಮರಣದಂಡನೆ ಶಿಕ್ಷೆ ರದ್ದು ಮಾಡಿದ ಕೋರ್ಟ್‌!