ರಾಜ್ಯ ರಾಜಕಾರಣದಲ್ಲಿ ಮೆಗಾ ಟ್ವಿಸ್ಟ್ : ಹಿರಿಯರ ಅಸಮಾಧಾನಕ್ಕೆ ಬಿಜೆಪಿ ಬಲಿ

Published : Nov 01, 2018, 10:56 AM ISTUpdated : Nov 01, 2018, 10:59 AM IST
ರಾಜ್ಯ ರಾಜಕಾರಣದಲ್ಲಿ ಮೆಗಾ ಟ್ವಿಸ್ಟ್  : ಹಿರಿಯರ ಅಸಮಾಧಾನಕ್ಕೆ ಬಿಜೆಪಿ ಬಲಿ

ಸಾರಾಂಶ

ರಾಜ್ಯ ರಾಜಕಾರಣಕ್ಕೆ ಇದೀಗ ಮೆಗಾ ಟ್ವಿಸ್ಟ್ ದೊರಕಿದೆ. ಬಿಜೆಪಿಗೆ ಏಕಾಏಕಿ ಬಿಗ್ ಶಾಕ್ ದೊರಕಿದೆ. ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಸ್ವಯಂ ನಿವೃತ್ತಿ ಪಡೆದುಕೊಂಡಿರುವುದಕ್ಕೆ ಇಬ್ಬರು ನಾಯಕರ ನಡುವಿನ ಭಿನ್ನಾಭಿಪ್ರಾಯ ಕಾರಣ ಎನ್ನಲಾಗುತ್ತಿದೆ. 

ರಾಮನಗರ : ರಾಮನಗರದಲ್ಲಿ ಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಚಂದ್ರಶೇಖರ್ ಅವರು ಕಣದಿಂದಲೇ ನಿವೃತ್ತಿ ಪಡೆದುಕೊಂಡಿದ್ದಾರೆ. 

ಚಂದ್ರಶೇಖರ್ ಅಸಮಾಧಾನಗೊಂಡಿದ್ದಾರೆ ಎನ್ನುವುದು ಬಿಜೆಪಿಯ ಬಹುತೇಕ ನಾಯಕರಿಗೆ ತಿಳಿದಿತ್ತು ಎನ್ನಲಾಗಿದ್ದು, ಬಿಜೆಪಿ ನಾಯಕರಾದ ಯೋಗಿಶ್ವರ್ ಮತ್ತು ಸದಾನಂದ ಗೌಡರ ನಡುವೆ ವೈಮನಸ್ಸಿಗೆ ಚಂದ್ರಶೇಖರ್ ಬಲಿಯಾದರು ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ. 

ಚುನಾವಣಾ ವೆಚ್ಚ ಬರಿಸುವ ಸಲುವಾಗಿ ಅಸಮಾಧಾನ ಹುಟ್ಟಿಕೊಂಡಿದ್ದು, ಸದಾನಂದ ಗೌಡ ಉಸ್ತುವಾರಿ ಆಗಿರುವುದು ಯೋಗಿಶ್ವರ್'ಗೆ ಇಷ್ಟ ಇರಲಿಲ್ಲ ಎನ್ನಲಾಗುತ್ತಿದೆ.  

ಯೋಗಿಶ್ವರ್ ಮತ್ತು ಸದಾನಂದ ಗೌಡ ನಡುವೆ ಹೊಂದಾಣಿಕೆ ಇರದ ಕಾರಣ ಪಕ್ಷ ಪಾರ್ಟಿ ಫಂಡ್ ಸಹ ನೀಡಿಲ್ಲ ಎನ್ನುವ ಅಸಮಾಧಾನ ಚಂದ್ರಶೇಖರ್ ಗೆ ಇತ್ತು.  ಚುನಾವಣಾ ವೆಚ್ಚ ಬರಿಸುವ ಸಮಯ ಬಂದಾಗ ಸದಾನಂದ ಗೌಡ ಮತ್ತು ಯೋಗಿಶ್ವರ್ ಸೈಲೆಂಟ್ ಆಗಿದ್ದರು. 

ಚಂದ್ರಶೇಖರ್ ಬುಧವಾರ ಪತ್ರಿಕಾಗೋಷ್ಠಿ ಮಾಡಿ ಯೋಗಿಶ್ವರ್ ಮೇಲೆ ಆರೋಪ ಮಾಡಲು ಸಿದ್ಧವಾಗಿದ್ದು, ಚಂದ್ರಶೇಖರ್ ಅವರನ್ನು ರುದ್ರೇಶ್ ಸಮಾಧಾನ ಪಡಿಸಿದ್ದರು. ಆದರೆ ಅವರು ಪಕ್ಷ ಬಿಡುವ ಬಗ್ಗೆ ಸಣ್ಣ ಸುಳಿವನ್ನೂ ಕೂಡ ನೀಡಿರಲಿಲ್ಲ. ಇನ್ನು ಚಂದ್ರಶೇಖರ್ ಅವರು ಬಿಜೆಪಿ ಬಿಡಲು ಸ್ವಾಮೀಜಿಯೊಬ್ಬರ ಸಲಹೆಯೂ ಕಾರಣ ಎಂದು ಹೆಳಲಾಗುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!