ರಾಮನಗರ(ಆ.26): ಪ್ರಕೃತಿ ವಿಕೋಪಕ್ಕೆ ತುತ್ತಾದ ಕೊಡುಗು ಜಿಲ್ಲೆಯ ಒಂದು ಸಾವಿರ ನೆರೆ ಸಂತ್ರಸ್ತರ ಕುಟುಂಬಗಳಿಗೆ ನೆರವು ನೀಡಲು ಬಿಡದಿಯ ನಟ ರಾಜು, ಸ್ನೇಹಿತರು ಮತ್ತು ಸಂಘ ಸಂಸ್ಥೆಗಳು, ವರ್ತಕರು, ಶಿಕ್ಷಣ ಸಂಸ್ಥೆಗಳು ಮುಂದಾಗಿವೆ. ಬಿಡದಿ ಪಟ್ಟಣದ ಕೋದಂಡರಾಮಸ್ವಾಮಿ ದೇವಾಲಯ ಆವರಣದಲ್ಲಿ ಎರಡು ದಿನಗಳಿಂದ ಸ್ವಯಂ ಸೇವಕರು 23 ಆಹಾರ ಪದಾರ್ಥಗಳನ್ನು ಒಳಗೊಂಡ ಅಡುಗೆ ಸಾಮಗ್ರಿಗಳ ಕಿಟ್ ತಯಾರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಈ ಆಹಾರ ಪದಾರ್ಥಗಳ ವೆಚ್ಚ ಸುಮಾರು 21 ಲಕ್ಷ ರು. ಎಂದು ಅಂದಾಜಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಹಾನಿಗೊಳಗಾಗಿರುವ ಎರಡು ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಖುದ್ದಾಗಿ ಆ ಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡುವ ಉದ್ದೇಶವನ್ನು ಬಿಡದಿ ಸ್ನೇಹಿತರು ಹೊಂದಿದ್ದಾರೆ.
ಈ ಬಗ್ಗೆ ಮಾತನಾಡಿದ ತಾಪಂ ಸದಸ್ಯ ಗಾಣಕಲ್ ನಟರಾಜು ಮಾತನಾಡಿ, ವಿವಿಧ ಸಂಘ ಸಂಸ್ಥೆಗಳು, ಸ್ನೇಹಿತರ ಸಹಕಾರದಿಂದ ಕೊಡಗಿನ ಜನತೆಯ ನೆರವಿಗಾಗಿ ಸುಮಾರು ₹21 ಲಕ್ಷ ವೆಚ್ಚದ ಆಹಾರ ಪದಾರ್ಥಗಳನ್ನು ವಿತರಣೆ ಮಾಡಲು ಸಿದ್ಧತೆ ಮಾಡಲಾಗುತ್ತಿದೆ ಎಂದರು.
ಈ ಕಾರ್ಯದಲ್ಲಿ ಜ್ಞಾನ ವಿಕಾಸ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸ್ವಯಂ ಸೇವಕ ರಾಗಿ ಕೆಲಸ ಮಾಡುತ್ತಿದ್ದಾರೆ. ನಾವು ನೀಡುವ ನೆರವು ಒಂದು ಕುಟುಂಬಕ್ಕೆ ತಕ್ಷಣ ಜೀವನ ನಡೆಸುವಷ್ಟು ಕಿಟ್ನಲ್ಲಿ ಸಾಮಗ್ರಿ ಗಳನ್ನು ಪ್ಯಾಕ್ ಮಾಡಲಾಗುತ್ತಿದೆ. ಇದು ಅರ್ಹ ನೆರೆ ಸಂತ್ರಸ್ತರಿಗೆ ತಲುಪಿಸುವ ಉದ್ದೇಶದಿಂದ ನಾವೇ ಸ್ಥಳಕ್ಕೆ ತೆಗದುಕೊಂಡು ಹೋಗಿ ವಿತರಣೆ ಮಾಡುತ್ತೇವೆ ಎಂದು ತಿಳಿಸಿದರು.
ಕಿಟ್ನಲ್ಲಿರುವ ಸಾಮಗ್ರಿಗಳು: ಪ್ರತಿ ಮನೆ ಗೊಂದು ನೀಡುವ ಅಡುಗೆ ಸಾಮಗ್ರಿಗಳ ಕಿಟ್ನಲ್ಲಿ 7 ಕೆ.ಜಿ ಅಕ್ಕಿ, ಅರ್ಧ ಕೆ.ಜಿ ಸಕ್ಕರೆ, 1 ಕೆ.ಜಿ ರವೆ, ಅರ್ಧ ಕೆ.ಜಿ ಬೇಳೆ, ಒಂದು ಕೆ.ಜಿ ಅವಲಕ್ಕಿ, ಅರ್ಧ ಕೆ.ಜಿ ಸಾಂಬಾರ್ ಪುಡಿ, ಒಂದು ಲೀಟರ್ ಅಡುಗೆ ಎಣ್ಣೆ, ಒಂದು ಕೆ.ಜಿ ರಸಂ ಪೌಡರ್, ಬಿಸ್ಕೆಟ್, ಬಟ್ಟೆ ಸೋಪು, ಉಪ್ಪು, ತಟ್ಟೆ, ಲೋಟ, ಸೌಟ್, ಮೇಣದ ಬತ್ತಿ, ಕಂಬಳಿ, ಒಂದು ಜೊತೆ ಮಹಿಳೆಯರಿಗೆ ಮತ್ತು ಪುರುಷರಿಗೆ ಬಟ್ಟೆ, ಚಾಪೆ, ಪೇಸ್ಟ್, ಬ್ರೆಶ್, ಮೈಸೋಪು, ಶ್ಯಾಂಪೂ, ಬೆಂಕಿ ಪೊಟ್ಟಣ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.