ಬಿಜೆಪಿಗೆ ಮತ್ತೊಂದು ಬಿಗ್ ಶಾಕ್ ನೀಡಿದ ಚಂದ್ರಶೇಖರ್

Published : Nov 03, 2018, 10:41 AM ISTUpdated : Nov 03, 2018, 12:39 PM IST
ಬಿಜೆಪಿಗೆ ಮತ್ತೊಂದು ಬಿಗ್ ಶಾಕ್ ನೀಡಿದ ಚಂದ್ರಶೇಖರ್

ಸಾರಾಂಶ

ರಾಮನಗರ ಉಪ ಚುನಾವಣಾ ಕಣದಿಂದ ಹಿಂದೆ ಸರಿದು ಬಿಜೆಪಿಗೆ ಆಘಾತ ನೀಡಿದ್ದ ಚಂದ್ರಶೇಖರ್ ಇದೀಗ ಮತ್ತೊಂದು ಶಾಕ್ ನೀಡಿದ್ದಾರೆ. 

ರಾಮನಗರ: ಚುನಾವಣಾ ಕಣದಿಂದ ಹಿಂದೆ ಸರಿದಿರುವ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಮತ್ತೊಂದು ದಾಳ ಉರುಳಿಸಿದ್ದು ಕ್ಷೇತ್ರದ 277 ಮತಗಟ್ಟೆಗಳಲ್ಲಿ ಎಲ್ಲೂ ಕೂಡ ಬಿಜೆಪಿ ಏಜೆಂಟರು ಮತಗಟ್ಟೆ ಪ್ರವೇಶಿಸದಂತೆ ಮಾಡಿದ್ದಾರೆ. 

ಗುರುವಾರ ಸಂಜೆ  ಅಭ್ಯರ್ಥಿ ಚಂದ್ರಶೇಖರ್ ಚುನಾವಣಾಧಿಕಾರಿಗೆ ನಮೂನೆ 9 ನ್ನು ನೀಡಿ ತಮ್ಮ ಅಧಿಕೃತ ಚುನಾವಣಾ ಏಜೆಂಟ್ ಆಗಿದ್ದ  ಪದ್ಮನಾಭ್ ರನ್ನು ರದ್ದುಗೊಳಿಸಿರುವುದಾಗಿ ಪತ್ರ ನೀಡಿದ್ದಾರೆ.

ತಕ್ಷಣದಿಂದಲೇ ಅಭ್ಯರ್ಥಿಯ ಅಧಿಕೃತ ಏಜೆಂಟ್ ಪದ್ಮನಾಭ್ ಅವರ ಸಹಿ ಇನ್ ವ್ಯಾಲಿಡ್ ಆಗಿದೆ( ಮಾನ್ಯತೆ ಕಳೆದುಕೊಂಡಿದೆ)
ಇದರಿಂದಾಗಿ‌ ಈಗಾಗಲೇ ಇಡೀ ಕ್ಷೇತ್ರದಲ್ಲಿ ಬೂತ್ ಮಟ್ಟದಲ್ಲಿ ನೇಮಕ ಮಾಡಿದ್ದ ಎಲ್ಲ ಬಿಜೆಪಿ ಮತಗಟ್ಟೆ ಏಜೆಂಟರ ನೇಮಕಾತಿ  ಪತ್ರಗಳು ಮಾನ್ಯತೆ ಕಳೆದುಕೊಂಡಿದ್ದು ಅವರು ಮತಗಟ್ಟೆಯಿಂದ ಹೊರಗುಳಿಯುವಂತಾಗಿದೆ.

ಈ ಬಗ್ಗೆ ಮಾಹಿತಿಯಿರದ ಬಿಜೆಪಿ ಅಭ್ಯರ್ಥಿಯ ಏಜೆಂಟ್ ಶುಕ್ರವಾರ ಸಂಜೆ ಚುನಾವಣಾಧಿಕಾರಿಯನ್ನು ಭೇಟಿ ಮಾಡಿದ ವೇಳೆ ಚುನಾವಣಾಧಿಕಾರಿ ಕೃಷ್ಣಮೂರ್ತಿ ಈ ವಿಷಯವನ್ನು  ಸ್ಪಷ್ಟ ಪಡಿಸಿದ್ದಾರೆ. 

ಚುನಾವಣಾ ಕಣದಿಂದ ಹಿಂದೆ ಸರಿದು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದ ಚಂದ್ರಶೇಖರ್ ಬಿಜೆಪಿಗೆ ದೊಡ್ಡ ಹೊಡೆತ ನೀಡಿದ್ದರು. ಮತದಾನದ ದಿನ ಮತ್ತು ಎಣಿಕೆ ದಿನ ಬಿಜೆಪಿ ಕಾರ್ಯಕರ್ತರು ಮತಗಟ್ಟೆ ಏಜೆಂಟರಾಗಿ ಕಾರ್ಯ ನಿರ್ವಹಿಸದಂತೆ ಮಾಡಿ  ಮತ್ತೊಂದು ಹೊಡೆತ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖಾಲಿ ಇರುವ ವೈದ್ಯ, ಸಿಬ್ಬಂದಿ ಹುದ್ದೆ ತಿಂಗಳಲ್ಲಿ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
3,600 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿಗೆ ಶೀಘ್ರ ಕ್ರಮ: ಗೃಹ ಸಚಿವ ಪರಮೇಶ್ವರ್‌