
ಬೆಳಗಾವಿ(ಸೆ.26): ಬಿ.ಜೆ.ಪಿಯವರು ಗೋವಾಕೆ ಹೋಗಿ ಚುನಾವಣೆ ಪ್ರಚಾರ ಮಾಡಿ ಬಂದರೆ ಸಾಲದು ಅಲ್ಲಿರುವ ಕನ್ನಡಿಗರ ಮೇಲೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸುವ ಕೆಲಸ ಮಾಡಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೋಳಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಕನ್ನಡಿಗರ ಮೇಲಿನ ದೌರ್ಜನ್ಯ ಮಾಧ್ಯಮಗಳಿಂದ ಗೊತ್ತಾಗಿದೆ. ಕರ್ನಾಟಕ ಸರ್ಕಾರ ಗೋವಾ ಕನ್ನಡಿಗರ ಪರವಿದೆ. ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ವಿಚಾರದ ಬಗ್ಗೆ ಚರ್ಚಿಸುವೆ.ಗೋವಾದ ಕನ್ನಡಿಗರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಿದೆ. ಸೌಂದರ್ಯದ ಹೆಸರಲ್ಲಿ ಕನ್ನಡಿಗರನ್ನು ಬೀದಿಗೆ ತಳ್ಳುತ್ತಿರುವುದು ಸರಿಯಲ್ಲ. ಈ ನಮ್ಮ ರಾಜ್ಯದ ಬಿಜೆಪಿ ನಾಯಕರು ಗೋವಾ ಸರ್ಕಾರಕ್ಕೆ ಅನ್ಯಾಯದ ಬಗ್ಗೆ ಹೇಳಬೇಕು. ಕೇವಲ ಚುನಾವಣೆ ಪ್ರಚಾರಕ್ಕೆ ಹೋಗಿ ಭಾಷಣ ಮಾಡಿದರೆ ಯಾವುದೇ ಪ್ರಯೋಜನವಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.