ರಮೇಶ್ ಜಾರಕಿಹೊಳಿ ಔಟ್ ..? ಮುಂದಿನ ನಡೆ ಏನು..?

Published : Dec 22, 2018, 12:17 PM ISTUpdated : Dec 22, 2018, 12:20 PM IST
ರಮೇಶ್ ಜಾರಕಿಹೊಳಿ ಔಟ್ ..? ಮುಂದಿನ ನಡೆ ಏನು..?

ಸಾರಾಂಶ

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ ಜೋರಾಗಿದೆ. ಇದೇ ವೇಳೆ ಅತೃಪ್ತರ ಸಂಖ್ಯೆಯೂ ಕೂಡ  ಹೆಚ್ಚಾಗುತ್ತಿದೆ. ಇದರಿಂದ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂದು ಬಿಜೆಪಿ ಮುಖಂಡ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

ಹುಬ್ಬಳ್ಳಿ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ ಜೋರಾಗಿರುವ ಬೆನ್ನಲ್ಲೇ ಕಾಂಗ್ರೆಸ್  ಮುಖಂಡರಲ್ಲಿ ಅತೃಪ್ತಿ ತಾಂಡವವಾಡುತ್ತಿದೆ ಎಂದು ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

ಸಂಪುಟ ವಿಸ್ತರಣೆ ಮಾಡುವುದಾಗಿ ಮೂರು ತಿಂಗಳು ಕಾಲಹರಣ ಮಾಡಿದ್ದಾರೆ. ಸಂಪುಟ ವಿಸ್ತರಣೆ ನಂತರ ಈಗ ಅಸಮಾಧಾನ ಭುಗಿಲೇಳಲಿದೆ.

ಸಂಪುಟದಿಂದ ಸಚಿವ ರಮೇಶ್ ಜಾರಕಿಹೋಳಿ ಅವರನ್ನು ಕೈಬಿಟ್ಟಿದ್ದು ಸಾಕಷ್ಟು ಪರಿಣಾಮ ಬೀರಲಿದೆ. ಸಂಪುಟ ವಿಸ್ತರಣೆ ದಿನವಾದ ಶನಿವಾರ ಸಂಜೆವರೆಗೆ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ ಎಂದು ಹೇಳಿದ್ದಾರೆ. 

ನಾವು 104 ಜನ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡುತ್ತಿದ್ದೇವೆ‌. ಅಸಮಾಧಾನ ಭುಗಿಲೆದ್ದ ಮೇಲೆ ಬಿಜೆಪಿ ಶಾಸಕಾಂಗ ಸಭೆ ಕರೆಯುತ್ತೇನೆ. ಸಭೆಯಲ್ಲಿ ಮುಂದಿನ ನಡೆಯ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ಹೇಳಿದರು. 

ಬಿಜೆಪಿ ಡಿನ್ನರ್‌ಗೆ ರಮೇಶ್‌ ಜಾರಕಿಹೊಳಿ!

 

ರಾಜ್ಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ರೈತರಿಗೆ ಟೋಪಿ ಹಾಕುತ್ತಾ ಬಂದಿದ್ದಾರೆ ಎಂದು ಅಸಮಾಧಾನ ಹೊರಹಾಕಿದ ಯಡಿಯೂರಪ್ಪ ಬೆಳಗಾವಿ ಅಧಿವೇಶನದಲ್ಲೇ  ಸರ್ಕಾರದ ದೋಷ ಎತ್ತಿ ತೋರಿಸುತ್ತಾ ಬಂದಿದ್ದೇವೆ. ಜ್ವಲಂತ ಸಮಸ್ಯೆಗಳ ಬಗ್ಗೆಯೂ ಕೂಡ ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ