ದೋಸ್ತಿ ಸರ್ಕಾರದಿಂದ ಸಚಿವ ರಮೇಶ್ ಜಾರಕಿಹೊಳಿ ದೂರ..?

Published : Dec 08, 2018, 01:07 PM IST
ದೋಸ್ತಿ ಸರ್ಕಾರದಿಂದ ಸಚಿವ ರಮೇಶ್ ಜಾರಕಿಹೊಳಿ ದೂರ..?

ಸಾರಾಂಶ

ಈಗಾಗಲೇ ಅನೇಕ ಸಂಪುಟ ಸಭೆಗಳಿಗೆ ಗೈರಾದ ರಮೇಶ್ ಜಾರಕಿಹೊಳಿ ದಿನ ದಿನವೂ ಕೂಡ ಸರ್ಕಾರದಿಂದ ದೂರ ಉಳಿಯುತ್ತಿದ್ದಾರೆ. ಇದೀಗ ಬೆಳಗಾವಿ ಚಳಿಗಾದ ಅಧಿವೇಶನಕ್ಕೂ ಕೂಡ ಗೈರು ಹಾಜರಾಗುವ ಸಾಧ್ಯತೆ ಇದೆ. 

ಬೆಳಗಾವಿ :  ಈಗಾಗಲೇ ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ದೂರವೇ ಉಳಿಯುತ್ತಿರುವ ಸಚಿವ ರಮೇಶ್ ಜಾರಕಿಹೊಳಿ ಇದೀಗ ಮತ್ತೊಮ್ಮೆ ದೂರ ಉಳಿಯುತ್ತಿದ್ದಾರೆ. 

ಸರ್ಕಾರದಲ್ಲಿ ಇದುವರೆಗೂ ನಡೆದ ಅನೇಕ ಸಚಿವ ಸಂಪುಟ ಸಭೆಗಳಿಗೆ ಗೈರಾಗಿರುವ ಅವರು ಇದೀಗ ಸೋಮವಾರದಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೂ ಕೂಡ ಗೈರಾಗುವ ಸಾಧ್ಯತೆ ಇದೆ. 

ಕಳೆದ ನವೆಂಬರ್ 1 ರಿಂದಲೂ ಕೂಡ ಯಾವುದೇ ರೀತಿಯ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ಅವರು, ದೋಸ್ತಿ ಸರ್ಕಾರದಿಂದ ದೂರವೇ ಉಳಿಯುತ್ತಿದ್ದಾರೆ. ಅಲ್ಲದೇ ಸರ್ಕಾರಿ ವಾಹನವನ್ನೂ ಕೂಡ ಬಳಕೆ ಮಾಡುತ್ತಿಲ್ಲ. ಇದರಿಂದ ರಮೇಶ್ ಜಾರಕಿಹೊಳಿ ನಡೆ ಸಾಕಷ್ಟು ಅನುಮಾನವನ್ನು ಹುಟ್ಟು ಹಾಕಿದೆ.  

ಸರ್ಕಾರದ ವಿರುದ್ಧ ಹಾಗೂ ಕಾಂಗ್ರೆಸ್ ಮುಖಂಡರ ವಿರುದ್ಧ ಈ ಹಿಂದೆ ಪದೇ ಪದೇ ಅಸಮಾಧಾನ ಹೊರಹಾಕುತ್ತಿದ್ದ ಅವರು ಒಟ್ಟು 10 ಸಂಪುಟ ಸಭೆಗಳಿಗೆ ಗೈರಾಗಿದ್ದರು. ಅಲ್ಲದೇ ಪಕ್ಷ ತೊರೆಯುತ್ತಾರೆ ಎನ್ನುವ ಬಗ್ಗೆಯೂ ಕೂಡ ಸಾಕಷ್ಟು ಚರ್ಚೆಗಳಾಗಿದ್ದವು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!
ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?