
ಬಳ್ಳಾರಿ : ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ರಮೇಶ್ ಜಾರಕಿಹೊಳಿ ಅವರು ಇದೀಗ ಮತ್ತೆ ಹರಿಹಾಯ್ದಿದ್ದಾರೆ. ಸಚಿವ ಡಿ.ಕೆ. ಶಿವಕುಮಾರ್ ಅವರು ಶೋ ಮಾಡೋದು ಬಿಟ್ಟು ಕೆಲಸ ಮಾಡಿದರೆ ಒಳಿತು’ ನೇರ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಕೂಡ್ಲಿಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲಿಂಗಾಯತ ಧರ್ಮದ ಕುರಿತು ಡಿ.ಕೆ. ಶಿವಕುಮಾರ್ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ . ಆದರೆ, ಈ ಬಗ್ಗೆ ಆಕ್ಷೇಪ ಇದ್ದಿದ್ದರೆ ಸಚಿವ ಸಂಪುಟ ಸಭೆಯಲ್ಲಿಯೇ ಚರ್ಚೆ ಮಾಡಬಹುದಿತ್ತಲ್ಲವೇ? ಯಾಕೆ ಮೌನ ವಹಿಸಿದ್ದರು? ಇದೀಗ ಬಹಿರಂಗ ಹೇಳಿಕೆ ನೀಡುವ ಉದ್ದೇಶವೇನು? ಅವರ ಹಿಂಬಾಲಕರಾದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡು ವಾಗ ಡಿ.ಕೆ. ಶಿವಕುಮಾರ್ ಎಲ್ಲಿಗೆ ಹೋಗಿದ್ದರು? ಪ್ರತಿ ಸಭೆಯಲ್ಲಿ ಮಾತನಾಡಿದರೂ ಏಕೆ ತಡೆಯಲಿಲ್ಲ ಎಂದು ಪ್ರಶ್ನಿಸಿದರು.
ಅಲ್ಲದೆ, ಲಿಂಗಾಯತ ಧರ್ಮದ ವಿಚಾರ ಕುರಿತು ಸಂಪುಟ ಸಭೆಗಳಲ್ಲಿ ಅಂದು ಸಚಿವರಾಗಿದ್ದ ಈಶ್ವರ ಖಂಡ್ರೆ ಮತ್ತು ಎಸ್.ಎಸ್.ಮಲ್ಲಿಕಾರ್ಜುನ ಅವರು ಮಾತ್ರ ಪರ ವಿರೋಧವಾಗಿ ಚರ್ಚಿಸಿದರೆ ವಿನಃ ಇವರೇಕೆ (ಡಿಕೆಶಿ) ಮೌನವಾಗಿದ್ದರು? ಎಂದು ಕೇಳಿದರು. ಪ್ರತ್ಯೇಕ ಧರ್ಮದ ಹೇಳಿಕೆಯನ್ನು ನಾವು ಪರಿಗಣಿಸಿದ್ದೇವೆ ಅಷ್ಟೇ. ಈ ವಿಚಾರದಲ್ಲಿ ಎಂ.ಬಿ.ಪಾಟೀಲ್ ಅವರಿಗೆ ನಮ್ಮ ಬೆಂಬಲವಿದೆ ಎಂದರು.
ನಾಗೇಂದ್ರಗೆ ಟಿಕೆಟ್ ತಪ್ಪಲು ಕುಮಾರಸ್ವಾಮಿ ಕಾರಣರಲ್ಲ: ಶಾಸಕ ಬಿ. ನಾಗೇಂದ್ರ ಅವರ ಸಹೋದರನಿಗೆ ಟಿಕೆಟ್ ತಪ್ಪಲು ಎಚ್.ಡಿ. ಕುಮಾರಸ್ವಾಮಿ ಅವರು ಕಾರಣರಲ್ಲ. ಯಾವ ಕುತಂತ್ರದಿಂದ ಕೈ ತಪ್ಪಿದೆಯೋ ಗೊತ್ತಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.