ಬೆಂಗಳೂರಿನತ್ತ ರಮೇಶ್ ಜಾರಕಿಹೊಳಿ ದಿಢೀರ್ ಪ್ರಯಾಣ !

Published : May 20, 2019, 10:55 AM ISTUpdated : May 20, 2019, 03:31 PM IST
ಬೆಂಗಳೂರಿನತ್ತ ರಮೇಶ್ ಜಾರಕಿಹೊಳಿ ದಿಢೀರ್ ಪ್ರಯಾಣ !

ಸಾರಾಂಶ

ಕೈ ಅತೃಪ್ತ ನಾಯಕ ರಮೇಶ್ ಜಾರಕಿಹೊಳಿ ದಿಢೀರ್ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಎಕ್ಸಿಟ್ ಪೋಲ್ ವರದಿಗಳು ಬಹಿರಂಗವಾದ ಬೆನ್ನಲ್ಲೇ ಇತ್ತ ಆಗಮಿಸಿದ್ದಾರೆ.

ಬೆಳಗಾವಿ : ಇತ್ತ ಎಕ್ಸಿಟ್  ಪೋಲ್ ವರದಿಗಳು ಬಂದರೆ ಅತ್ತ ಕೈ ಅತೃಪ್ತ ಶಾಸಕ  ರಮೇಶ್ ಜಾರಕಿಹೊಳಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಒಂದು ವೇಳೆ ಎಕ್ಸಿಟ್ ಪೋಲ್ ವರದಿಗಳು ನಿಜವಾದಲ್ಲಿ ರಾಜ್ಯ ಮೈತ್ರಿ ಸರ್ಕಾರಕ್ಕೆ ಕಂಟಕವಾಗಲಿದೆ ಎಂದು ವರದಿಗಳು ಹೇಳಿದ್ದು, ಇದೀಗ ರಮೇಶ್ ಜಾರಕಿಹೊಳಿ ಫಲಿತಾಂಶಕ್ಕೂ ಮೂಂಚೆ ಬೆಂಗಳೂರಿಗೆ ಆಗಮಿಸಿದ್ದಾರೆ.

"

ಫಲಿತಾಂಶದ ಬಳಿಕ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಮುಖಂಡರು ಹೇಳಿಕೆಗಳನ್ನು ನೀಡುತ್ತಿದ್ದು, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎನ್ನುತ್ತಿದ್ದಾರೆ. 

ಇತ್ತ ಬೆಂಗಳೂರಿನಲ್ಲಿ ಅತೃಪ್ತ  ಮುಖಂಡರೊಡನೆ ಸಭೆ ನಡೆಸಲು ಪ್ಲಾನ್ ಮಾಡಿ, ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ಹೇಳಲಾಗಿದೆ. 

ಈಗಾಗಲೇ ರಮೇಶ್ ಜಾರಕಿಹೊಳಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ವಿಚಾರ ಸದ್ದು ಮಾಡುತ್ತಿದೆ. ಕೆಲ ದಿನಗಳ ಹಿಂದಷ್ಟೇ ಕೆಲ ಶಾಸಕರೊಂದಿಗೆ ರಮೇಶ್ ಕಮಲ ಪಾಳಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ಮುಖಂಡರೇ ಹೇಳಿಕೆ ನೀಡಿದ್ದರು. 

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ