ನಿಮಗೆಲ್ಲಾ ಕಾದಿದೆ ಅಚ್ಚರಿ : ಕುತೂಹಲ ಸೃಷ್ಟಿಸಿದ ಸ್ಪೀಕರ್ ಹೇಳಿಕೆ

Published : Jul 29, 2019, 07:23 AM IST
ನಿಮಗೆಲ್ಲಾ ಕಾದಿದೆ  ಅಚ್ಚರಿ : ಕುತೂಹಲ ಸೃಷ್ಟಿಸಿದ ಸ್ಪೀಕರ್  ಹೇಳಿಕೆ

ಸಾರಾಂಶ

ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ನಿಮಗೆಲ್ಲಾ ಅಚ್ಚರಿ ಕಾದಿದೆ ಎಂದು ಕುತೂಹಲ ಸೃಷ್ಟಿ ಮಾಡಿದ್ದಾರೆ.

ಬೆಂಗಳೂರು [ಜು.29]:  ಸದ್ಯದ ರಾಜಕೀಯ ಪರಿಸ್ಥಿತಿಯಿಂದ ಮಾನಸಿಕವಾಗಿ ಸಾಕಷ್ಟುನೊಂದಿದ್ದೇನೆ. ನಾಲ್ಕು ದಶಕದ ರಾಜಕೀಯ ಜೀವನದ ಅಂತಿಮ ಘಟ್ಟಕ್ಕೆ ಬಂದಿದ್ದೇನೆ. ನಾಳೆ ವಿಧಾನಸಭೆ ಅಧಿವೇಶನದಲ್ಲಿ ಎಲ್ಲರಿಗೂ ಅಚ್ಚರಿ ಕಾದಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಕೆ.ಆರ್‌. ರಮೇಶ್‌ ಕುಮಾರ್‌ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

ಈ ಮೂಲಕ ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಬೆನ್ನಲ್ಲೇ ಸ್ಪೀಕರ್‌ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರದ ಸದನದಲ್ಲಿ ನಿಮಗೆ ಅಚ್ಚರಿ ಕಾದಿದೆ. ಏನು ಹೇಳಬೇಕು ಎಂದುಕೊಂಡಿದ್ದೇನೆ ಎಂಬುದನ್ನು ಸದನದಲ್ಲೇ ಹೇಳುತ್ತೇನೆ. ನನ್ನ ನಾಲ್ಕು ದಶಕದ ರಾಜಕೀಯ ಜೀವನದ ಅಂತಿಮ ಘಟ್ಟಕ್ಕೆ ಬಂದಿದ್ದೇನೆ. ಸದ್ಯದ ರಾಜಕೀಯದ ಪರಿಸ್ಥಿತಿಯಲ್ಲಿ ಮಾನಸಿಕವಾಗಿ ಸಾಕಷ್ಟುನೊಂದಿದ್ದೇನೆ. ನಾಳಿನ ಸದನವನ್ನು ನೀವು ತಪ್ಪಿಸಿಕೊಳ್ಳಬೇಡಿ ಎಂದು ಹೇಳಿದರು.

ಕಳೆದ ಗುರುವಾರದ ಸುದ್ದಿಗೋಷ್ಠಿಯಲ್ಲೂ ಸ್ಪೀಕರ್‌ ಸ್ಥಾನದಿಂದ ನಿರ್ಗಮಿಸುವ ಬಗ್ಗೆ ಪರೋಕ್ಷವಾಗಿ ಮುನ್ಸೂಚನೆ ನೀಡಿದ್ದ ಅವರು, ಹೊಸ ಸರ್ಕಾರ ರಚನೆಯಾದ ಬಳಿಕವೂ ನನ್ನ ಮೇಲೆ ಅವರಿಗೆæ ವಿಶ್ವಾಸ ಇಲ್ಲದಿದ್ದರೆ ಸ್ಪೀಕರ್‌ ಬದಲಾವಣೆಗೆ ಅವಿಶ್ವಾಸ ಮತಕ್ಕೆ ಮನವಿ ಮಾಡಬಹುದು. ನಾನು 15 ದಿನದೊಳಗಾಗಿ ಅವರಿಗೆ ಅವಿಶ್ವಾಸಕ್ಕೆ ಅವಕಾಶ ಮಾಡಿಕೊಡಬೇಕಾಗುತ್ತದೆ. ಆದರೆ, ಗೌರವದಿಂದ ಬದುಕುವ ನಾನು ಅಲ್ಲಿಯವರೆಗೂ ಕಾಯುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಅಧಿವೇಶನದಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಪ್ರಕಟಿಸಲಿರುವ ಪ್ರಕಟಣೆ ಬಗ್ಗೆ ಕುತೂಹಲ ಮೂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಿಂದೂ, ಧರ್ಮವೇ ಅಲ್ಲ, ಅದೊಂದು ಬೈಗುಳ ಶಬ್ದ : ಬಿ.ಜಿ ಕೋಳ್ಸೆ
ಸಿದ್ದರಾಮಯ್ಯ ಬಳಿಕ ಸತೀಶ್‌ ಜಾರಕಿಹೊಳಿ ಸಿಎಂ ಆದರೆ ಖುಷಿ: ಬಿ.ಕೆ.ಹರಿಪ್ರಸಾದ್‌