
ಬೆಂಗಳೂರು(ಡಿ. 04): ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಅರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಇಲ್ಲಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವರು ಜ್ವರ ಹಾಗೂ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಆಸ್ಪತ್ರೆಯ ಸಾಮಾನ್ಯ ವಾರ್ಡ್'ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಸುವರ್ಣನ್ಯೂಸ್'ಗೆ ನೀಡಿರುವ ಮಾಹಿತಿ ಪ್ರಕಾರ, ಬಹುತೇಕ ಇಂದೇ ರಮೇಶ್'ಕುಮಾರ್ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.
ಸರಳಜೀವಿ:
ರಮೇಶ್ ಕುಮಾರ್ ಅವರು ಸರಕಾರಿ ಆಸ್ಪತ್ರೆಯ ಜನರಲ್ ವಾರ್ಡ್'ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದು ಹಲವರ ಹುಬ್ಬೇರಿಸಿದೆ. ಆದರೆ, ಇವರನ್ನ ಬಲ್ಲವರಿಗೆ ಇದರಲ್ಲಿ ಯಾವುದೇ ಅಚ್ಚರಿ ಇಲ್ಲ. ಆರೋಗ್ಯ ಸಚಿವರ ಆಪ್ತಸಹಾಯಕ ಪ್ರಸಾದ್ ಹೇಳುವ ಪ್ರಕಾರ, ರಮೇಶ್ ಕುಮಾರ್ ಅವರು ತಮಗೆ ಅನಾರೋಗ್ಯ ಬಂದಾಗೆಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಖಾಸಗಿ ಆಸ್ಪತ್ರೆ ಅವರು ಹೋಗುವುದೇ ಇಲ್ಲ. ಕಳೆದ ಹಲವು ವರ್ಷಗಳಿಂದ ಅವರಿಗೆ ಸ್ನಾಯು ತೊಂದರೆ ಇದ್ದು, ಆಗಾಗ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರಂತೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.