
ಕನಕಪುರ(ಸೆ.25): ಸೆಲ್ಫಿ ತೆಗೆದುಕೊಳ್ಳುವ ಸಂಭ್ರಮದಲ್ಲಿ ನೀರಿನಲ್ಲಿ ಮುಳುಗುತ್ತಿರುವ ಸ್ನೇಹಿತನನ್ನು ಮರೆತ ಕಾರಣ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ರಾಮಗೊಂಡ್ಲು ಬಳಿ ನಡೆದಿದೆ.
ಜಯನಗರ ನ್ಯಾಷನಲ್ ಕಾಲೇಜಿನಿಂದ 21 ವಿದ್ಯಾರ್ಥಿಗಳ ತಂಡ ರಾಮಗೊಂಡ್ಲು ಬಳಿ ಟ್ರಕ್ಕಿಂಗ್'ಗೆ ತೆರಳಿದ್ದಾರೆ. ಅಲ್ಲೇ ಸ್ಥಳೀಯ ಈಜುಕೊಳದಲ್ಲಿ ಎಲ್ಲ ಸ್ನೇಹಿತರು ಮೋಜು ಮಾಡುತ್ತಿದ್ದರು. ಈ ಸಮಯದಲ್ಲಿ ವಿದ್ಯಾರ್ಥಿ ವಿಶ್ವಾಸ್ ಈಜು ಬಾರದೆ ಮುಳುಗುತ್ತಿದ್ದ. ಈ ಸಂದರ್ಭದಲ್ಲಿ ಆತನನ್ನು ರಕ್ಷಿಸುವ ಬದಲು ಉಳಿದ ಸ್ನೇಹಿತರು ಸೆಲ್ಫಿ ತೆಗೆದುಕೊಳ್ಳುವಲ್ಲಿ ನಿರತರಾಗಿದ್ದರು. ಕೊನೆಗೂ ಈತನನ್ನು ಉಳಿಸಲು ಯಾರು ಮುಂದಾಗದ ಕಾರಣ ವಿಶ್ವಾಸ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ದೃಶ್ಯ ಫೋಟೊದಲ್ಲಿ ಸೆರೆಯಾಗಿದೆ. ಪುತ್ರನನ್ನು ಕಳೆದುಕೊಂಡಿರುವ ವಿಶ್ವಾಸ್'ನ ಪೋಷಕರು ತಮ್ಮ ಮಗನ ಸಾವಿಗೆ ಕಾಲೇಜ್ ಆಡಳಿತ ಮಂಡಳಿ ಕಾರಣವೆಂದು ಆರೋಪಿಸಿ ಕಾಲೇಜು ಮುಂಭಾಗ ಶವವಿಟ್ಟು ಸಂಬಂಧಿಕರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.