
ಪಾಟ್ನ(ಜೂ.20): ಆಡಳಿತರೂಢ ಎನ್'ಡಿಎ ಒಕ್ಕೂಟದಿಂದ ಮುಂಬರುವ ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿರುವ ರಾಮ್'ನಾಥ್ ಕೋವಿಂದ್ ಅವರು ಬಿಹಾರ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೋವಿಂದ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ' ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ರಾಜೀನಾಮೆಯಿಂದ ತೆರವಾದ ಬಿಹಾರ ರಾಜ್ಯಪಾಲ ಹುದ್ದೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿ'ನಾಥ್ ತ್ರಿಪಾಠಿ ಹೆಚ್ಚುವರಿಯಾಗಿ ವಹಿಸಿಕೊಂಡಿದ್ದಾರೆ.
ಬಿಹಾರದ ರಾಜ್ಯಪಾಲರಾಗಿದ್ದ 71 ವರ್ಷದ ಕೋವಿಂದ್ ಅವರು ಕೆಳಮಟ್ಟದಿಂದ ಉನ್ನತ ಹಂತಕ್ಕೇರಿದ ದಲಿತ ನಾಯಕರಾಗಿದ್ದು ಬಿಜೆಪಿಯಿಂದ ಎಸ್'ಸಿ, ಎಸ್ಟಿ ಮೋರ್ಚಾ ಅಧ್ಯಕ್ಷ,2 ಬಾರಿ ರಾಜ್ಯಸಭಾ ಸದಸ್ಯ ಸೇರಿದಂತೆ ಹಲವು ಹುದ್ದೆಗಳನ್ನು ನಿಭಾಯಿಸಿದ್ದಾರೆ.
ಪ್ರಸ್ತುತ ರಾಷ್ಟ್ರಪತಿಯಾಗಿರುವ ಪ್ರಣಾಬ್ ಮುಖರ್ಜಿ ಅವರ ಅವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದ್ದು, ಜುಲೈ 17 ರಂದು ಚುನಾವಣೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.