ವಿವಿಧತೆಯಲ್ಲಿ ಏಕತೆ ಭಾರತದ ಶಕ್ತಿ : ನೂತನ ರಾಷ್ಟ್ರಪತಿ ರಾಮನಾಥ್ ಕೋವಿಂದ್

Published : Jul 25, 2017, 05:29 PM ISTUpdated : Apr 11, 2018, 12:47 PM IST
ವಿವಿಧತೆಯಲ್ಲಿ ಏಕತೆ ಭಾರತದ ಶಕ್ತಿ : ನೂತನ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಸಾರಾಂಶ

ನಾವು ಕೆಲವೊಮ್ಮೆ ಒಪ್ಪುತ್ತೇವೆ ಮತ್ತೆ ಕೆಲವೊಮ್ಮೆ ಪ್ರಶ್ನಿಸುತ್ತೇವೆ. ಆದರೆ ನಾವು ಒಬ್ಬರನ್ನೊಬ್ಬರು ಗೌರವಿಸಲು ಕಲಿತ್ತಿರುವುದೇ ಪ್ರಜಾಪ್ರಭುತ್ವದ ನಿಜವಾದ ಶಕ್ತಿ. ಸಾಮಾನ್ಯ ಕುಟುಂಬದಿಂದ ಬಂದ ನನಗೆ ಭಾರತದ ರಾಷ್ಟ್ರಪತಿಯಾಗಿ ಅತೀ ದೊಡ್ಡ ಜವಾಬ್ದಾರಿಯನ್ನು ವಹಿಸಿರುವುದಕ್ಕೆ ನಾನು ಎಲ್ಲರಿಗೂ ಕೃತಜ್ಞನಾಗಿದ್ದೇನೆ' ಎಂದು ಹೇಳಿದರು.

ನವದೆಹಲಿ(ಜು.25): ವಿವಿಧತೆಯಲ್ಲಿ ಏಕತೆಯೇ ನಮ್ಮ ದೇಶದ ನಿಜವಾದ ಶಕ್ತಿ ನಾವು ಐಕ್ಯತೆಯಿಂದಾಗಿಯೇ ಜಾಗತಿಕ ಮಟ್ಟದಲ್ಲಿ  ಮುನ್ನಡೆ ಸಾಧಿಸಿದ್ದೇವೆ' ಎಂದು ಭಾರತದ ನೂತನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿಳಿಸಿದರು.

ಸಂಸತ್ ಭವನದ ಸೆಂಟ್ರಲ್ ಸಭಾಂಗಣದಲ್ಲಿ ಭಾರತದ 14ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿ ಮಾತನಾಡಿದರು. ನಮ್ಮದು ಶಾಂತಿಯುತ ರಾಷ್ಟ್ರ, ಇದೇ ರೀತಿಯ ಸೌಹಾರ್ದ ಮಾರ್ಗದಲ್ಲಿಯೇ ನಾವು ಏಕತೆಯನ್ನು ಸಾಧಿಸಬೇಕು. ನಾವು ನಮ್ಮ ಪರಂಪರೆ ಮತ್ತು ಸಂಸ್ಕೃತಿಯ ಬಗ್ಗೆ ಹೆಮ್ಮೆಪಡುತ್ತೇವೆ. ಜಗತ್ತಿಗೆ ಸಮರ್ಥ ಭಾರತವನ್ನು ತೋರಿಸುವ ಸುಸಮಯ ಇದಾಗಿದೆ' ಎಂದು ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ ಮಾತುಗಳನ್ನು ಕೋವಿಂದ್ ಪುನರುಚ್ಚರಿಸಿದರು.

ನಾವು ಕೆಲವೊಮ್ಮೆ ಒಪ್ಪುತ್ತೇವೆ ಮತ್ತೆ ಕೆಲವೊಮ್ಮೆ ಪ್ರಶ್ನಿಸುತ್ತೇವೆ. ಆದರೆ ನಾವು ಒಬ್ಬರನ್ನೊಬ್ಬರು ಗೌರವಿಸಲು ಕಲಿತ್ತಿರುವುದೇ ಪ್ರಜಾಪ್ರಭುತ್ವದ ನಿಜವಾದ ಶಕ್ತಿ. ಸಾಮಾನ್ಯ ಕುಟುಂಬದಿಂದ ಬಂದ ನನಗೆ ಭಾರತದ ರಾಷ್ಟ್ರಪತಿಯಾಗಿ ಅತೀ ದೊಡ್ಡ ಜವಾಬ್ದಾರಿಯನ್ನು ವಹಿಸಿರುವುದಕ್ಕೆ ನಾನು ಎಲ್ಲರಿಗೂ ಕೃತಜ್ಞನಾಗಿದ್ದೇನೆ' ಎಂದು ಹೇಳಿದರು.

ಬೃಹತ್ ಜವಾಬ್ದಾರಿಯನ್ನು ಅರ್ಥ ಮಾಡಿಕೊಂಡು 125 ಕೋಟಿ ಭಾರತೀಯರನ್ನು ಪ್ರತಿನಿಧಿಸುವ ಸಲುವಾಗಿ ನಾನು ಇಲ್ಲಿ ನಿಂತಿದ್ದೇನೆ. ಮಾಜಿ ಅಧ್ಯಕ್ಷರಾದ  ಬಾಬು ರಾಜೇಂದ್ರ ಪ್ರಸಾದ್ ಅವರಿಂದ ಪ್ರಣವ್ ಮುಖರ್ಜಿ'ವರೆಗೆ  ಎಲ್ಲರೂ ಶ್ರೇಷ್ಠ ನಾಯಕರುಗಳಾಗಿದ್ದಾರೆ.  ನಾನು ಆ  ಶ್ರೇಷ್ಠರ ಹಾದಿಯಲ್ಲಿ ಮುನ್ನಡೆಯಲು ಬಯಸುತ್ತೇನೆ' ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

71 ವರ್ಷದ ಕೋವಿಂದ್ ಅವರಿಗೆ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಪ್ರಮಾಣ ವಚನ ಬೋಧಿಸಿದರು. ಉತ್ತರ ಪ್ರದೇಶದ ಮೊದಲ ರಾಷ್ಟ್ರಪತಿ ಇವರಾಗಿದ್ದು, ಕೆ.ಆರ್. ನಾರಾಯಣ್ ನಂತರ 2ನೇ ದಲಿತ ರಾಷ್ಟ್ರಪತಿಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?