
ಬೆಂಗಳೂರು[ಜ.09] ಕಾಂಗ್ರೆಸ್ ಸೋಶಿಯಲ್ ಮೀಡಿಯಾದ ಉಸ್ತುವಾರಿ ವಹಿಸಿಕೊಂಡಿರುವ ರಮ್ಯಾ ಅವರ ಫೋಟೋ ಸೋಶಿಯಲ್ ಮೀಡಿಯಾದಲ್ಲೇ ಹರಿದಾಡುತ್ತಿದೆ.
ರಮ್ಯಾ ಅವರು ದುಬೈಯಲ್ಲಿ ಇರುವ ಫೋಟೋ ವೈರಲ್ ಆಗಿದೆ. ರಾಹುಲ್ ಗಾಂಧಿ ಸಹ ದುಬೈ ಪ್ರವಾಸ ಮಾಡಿದ್ದು ಅವರನ್ನು ಸ್ವಾಗತಿಸಲು ಮೊದಲೆ ತೆರಳಿದ್ದರು ಎಂದು ನೆಟ್ಟಿಗರು ಕುಟುಕಿದ್ದಾರೆ.
ರಮ್ಯಾಗೆ ಬಿಸಿ ಮುಟ್ಟಿಸಿದ ಅಭಿಮಾನಿಯ ಪತ್ರ...8 ಸಂಗತಿಗಳು ವೈರಲ್
ಮಂಡ್ಯ ಲೋಕಸಭೆಯಿಂದ ಆರಿಸಿ ಸಂಸತ್ತು ಪ್ರವೇಶಿಸಿದ್ದ ರಮ್ಯಾ ಮಂಡ್ಯದಿಂದಲೇ ಮನೆ ಖಾಲಿ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಗಾಗ ವಿವಾದಾತ್ಮಕ ಟ್ವೀಟ್ ಮಾಡುತ್ತ ಸುದ್ದಿಯಾಗುತ್ತಿದ್ದರು.
ನಾನು ಆಸ್ಟಿಯೋಕ್ಲ್ಯಾಟೋಮಾ (Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದೇನೆ. ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ. ನನ್ನ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದ್ರು ಮಾರಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಅಂಬರೀಶ್ ಅವರಿಗೆ ನಮನ ಸಲ್ಲಿಸಲು ಬರಲಿಕ್ಕೆ ಸಾಧ್ಯವಾಗಿಲ್ಲ ಎಂದು ಟ್ವೀಟ್ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.