
ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಯಾದರೆ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವ ಅನಿವಾರ್ಯತೆ ಬರುವುದರಿಂದ ಮಾಜಿ ಸಂಸದೆ ರಮ್ಯಾ ಮಂಡ್ಯ ರಾಜಕಾರಣದಿಂದ ದೂರ ಸರಿಯುವ ಸಾಧ್ಯತೆ ಹೆಚ್ಚಾಗಿದೆ ಎಂದು ರಮ್ಯಾ ತಾಯಿ ರಂಜಿತಾ ತಿಳಿಸಿದ್ದಾರೆ.
ಈ ಬಗ್ಗೆ ‘ಕನ್ನಡಪ್ರಭ’ದೊಂದಿಗೆ ಮಾತನಾಡಿದ ಅವರು ಮಂಡ್ಯ ತವರು ಕ್ಷೇತ್ರ ಎಂದು ಭಾವಿಸಿ ರಾಜಕಾರಣದಲ್ಲಿ ಬಹು ಬೇಗ ಖ್ಯಾತಿ ಹೊಂದಿದ್ದ ರಮ್ಯಾಗೆ ಈಗ ಸ್ಥಾನ ಸಿಗದೇ ಹೋದರೆ ಮುಂದೆ ಪರ್ಯಾಯ ದಾರಿಗಳನ್ನು ಹುಡುಕುವ ಅನಿವಾರ್ಯತೆಯೂ ಬರುತ್ತದೆ ಎಂದು ಸೂಚ್ಯವಾಗಿ ಹೇಳಿದರು.
ಇದೇವೇಳೆ ಈ ಬಾರಿಯ ಉಪಚುನಾವಣೆಯಲ್ಲಿ ರಮ್ಯಾ ಸ್ಪರ್ಧಿಸದಿದ್ರೆ ನಾನು ಸ್ಪರ್ಧಿಸುವ ಆಸೆ ಹೊಂದಿದ್ದು ಅವಕಾಶ ಸಿಗುತ್ತದೆ ಎಂದು ಭಾವಿಸಿದ್ದೇನೆ. ಆದ್ರೆ ಮೈತ್ರಿಯಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣದಲ್ಲಿ ಇರುವುದಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.