ಕುತೂಹಲ ಮೂಡಿಸಿದ ಎಚ್ ಡಿಕೆ - ಅಧಿಕಾರಿ ಭೇಟಿ

Published : Jun 21, 2018, 09:24 AM IST
ಕುತೂಹಲ ಮೂಡಿಸಿದ ಎಚ್ ಡಿಕೆ - ಅಧಿಕಾರಿ ಭೇಟಿ

ಸಾರಾಂಶ

ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರಾಗಿ ನೇಮಕ ಮಾಡುವ ಮಾತುಗಳು ಕೇಳಿಬಂದ ನಡುವೆಯೇ ಕರ್ನಾಟಕ ರಾಜ್ಯ  ಮುಕ್ತ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಂಗಪ್ಪ ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡುವ ಮೂಲಕ ಕುತೂಹಲ ಮೂಡಿಸಿದ್ದಾರೆ.   

ಬೆಂಗಳೂರು :  ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರಾಗಿ ನೇಮಕ ಮಾಡುವ ಮಾತುಗಳು ಕೇಳಿಬಂದ ನಡುವೆಯೇ ಕರ್ನಾಟಕ ರಾಜ್ಯ  ಮುಕ್ತ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಂಗಪ್ಪ ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. 

ಬುಧವಾರ ಕೃಷ್ಣಾಗೆ ಆಗಮಿಸಿದ ರಂಗಪ್ಪ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ರಂಗಪ್ಪ ಅವರನ್ನು ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರನ್ನಾಗಿ ನೇಮಕ ಮಾಡಲು ಚಿಂತನೆ ನಡೆಸಿರುವ ಬೆನ್ನಲ್ಲೇ ಮುಖ್ಯಮಂತ್ರಿಗಳ ಭೇಟಿಯು ಹಲವು ಅನುಮಾನಗಳಿಗೆ ಕಾರಣವಾಗಿದೆ. 

ರಂಗಪ್ಪ ಅವರನ್ನು ಸಲಹೆಗಾರರನ್ನಾಗಿ ನೇಮಕ ಮಾಡುವ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರತಿಪಕ್ಷ ಬಿಜೆಪಿ ಸೇರಿದಂತೆ ಹಲವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?