ಆದಿವಾಸಿ ಮಕ್ಕಳ ಕುರಿತು ರಾಣಿ ತ್ರಿಷಿಕಾ ಕುಮಾರಿ ಪಿಎಚ್‌ಡಿ

Published : Sep 02, 2018, 09:24 AM ISTUpdated : Sep 09, 2018, 09:39 PM IST
ಆದಿವಾಸಿ ಮಕ್ಕಳ ಕುರಿತು ರಾಣಿ ತ್ರಿಷಿಕಾ ಕುಮಾರಿ ಪಿಎಚ್‌ಡಿ

ಸಾರಾಂಶ

ಆದಿವಾಸಿ ಮಕ್ಕಳ ಕುರಿತು ಅಧ್ಯಯನ ನಡೆಸಿ ಪಿಎಚ್‌.ಡಿ ಪಡೆಯಲು ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಪತ್ನಿ ರಾಣಿ ತ್ರಿಷಿಕಾ ಕುಮಾರಿ ಮುಂದಾಗಿದ್ದಾರೆ. 

ಮೈಸೂರು :  ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಪತ್ನಿ ರಾಣಿ ತ್ರಿಷಿಕಾ ಕುಮಾರಿ ಅವರು ಆದಿವಾಸಿ ಮಕ್ಕಳ ಕುರಿತು ಸಂಶೋಧನೆ ನಡೆಸಲು ಮುಂದಾಗಿದ್ದಾರೆ.

ಆದಿವಾಸಿ ಮಕ್ಕಳ ಕುರಿತು ಅಧ್ಯಯನ ನಡೆಸಿ ಪಿಎಚ್‌.ಡಿ ಪಡೆಯಲು ಉದ್ದೇಶಿಸಿರುವ ಅವರು, ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ(ಡಿಡಿಪಿಐ) ಮಂಜುಳಾ ಅವರಿಂದ ಮಾಹಿತಿ ಕಲೆಹಾಕಿದ್ದಾರೆ. ಈ ಸಂದರ್ಭದಲ್ಲಿ ಅವರು ಬುಡಕಟ್ಟು ಮಕ್ಕಳ ನಿತ್ಯಜೀವನ, ಓದಿನ ಗುಣಮಟ್ಟ, ಸರ್ಕಾರದಿಂದ ಬುಡಕಟ್ಟು ಮಕ್ಕಳಿಗೆ ನೀಡುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ರಾಜಸ್ಥಾನದ ರಾಜಕೋಟ್‌ ರಾಜಮನೆತನದ ತ್ರಿಶಿಕಾ ದೇವಿ ಅವರು ಜೂನ್‌ 2016ರಲ್ಲಿ ಮೈಸೂರು ರಾಜವಂಶಸ್ಥ ಯದುವೀರ ಒಡೆಯರ್‌ ಅವರನ್ನು ವಿವಾಹವಾಗಿದ್ದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಬೆಂಗಳೂರಿನ ಕ್ರೈಸ್ವ್‌ ಕಾಲೇಜಿನಲ್ಲಿ ಎಂಬಿಎ ಪದವಿ ಪಡೆದಿರುವ ಅವರು ಇದೀಗ ಸಂಶೋಧನೆ ಬಗ್ಗೆ ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಅವರು ಸಂಶೋಧನೆ ನಡೆಸುತ್ತಿರುವ ವಿಶ್ವವಿಶ್ವಾನಿಲಯ, ಸಂಶೋಧನೆ ಸ್ವರೂಪ ಎಂಬಿತ್ಯಾದಿ ವಿವರಗಳು ಲಭ್ಯವಾಗಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್‌ ದೆವ್ವದ ಮನೆ, ದಿನಕ್ಕೊಂದು ಬಿಳಿ-ಕರಿ ದೆವ್ವ ಹೊರ ಬರ್ತಿವೆ: ಆರ್.ಅಶೋಕ್ ವ್ಯಂಗ್ಯ
ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಶೀಘ್ರ ಜಾರಿ: ಸಚಿವ ಶಿವರಾಜ ತಂಗಡಗಿ