ರಾಜಕೀಯ ಸಂಘರ್ಷ ಅಂತ್ಯ: ಹೊಸ ಪ್ರಧಾನಿ ಆಯ್ಕೆ!

Published : Dec 16, 2018, 02:14 PM ISTUpdated : Dec 16, 2018, 02:42 PM IST
ರಾಜಕೀಯ ಸಂಘರ್ಷ ಅಂತ್ಯ: ಹೊಸ ಪ್ರಧಾನಿ ಆಯ್ಕೆ!

ಸಾರಾಂಶ

ಕೊನೆಗೂ ಅಂತ್ಯ ಕಂಡ ರಾಜಕೀಯ ಸಂಘರ್ಷ| ಹೊಸ ಪ್ರಧಾನಿ ಆಯ್ಕೆಯಿಂದ ಕೊನೆಗೊಂಡ ಸಂಘರ್ಷ| ಶ್ರೀಲಂಕಾ ನೂತನ ಪ್ರಧಾನಿಯಾಗಿ ರನೀಲ್ ವಿಕ್ರಮಸಿಂಘೆ ಆಯ್ಕೆ| ಕೆಲ ದಿನಗಳ ಹಿಂದೆಯಷ್ಟೇ ಉಚ್ಛಾಟನೆಗೊಂಡಿದ್ದ ವಿಕ್ರಮಸಿಂಘೆ| ಮತ್ತೆ ಪ್ರಧಾನಿಯಾಗಿ ನೇಮಕಗೊಂಡ ರನಿಲ್ ವಿಕ್ರಮಸಿಂಘೆ|

ಕೊಲಂಬೋ(ಡಿ.16): ಶ್ರೀಲಂಕಾದ ಯುನೈಟೆಡ್ ನ್ಯಾಷನಲ್ ಪಾರ್ಟಿ ಅಧ್ಯಕ್ಷ ರನೀಲ್ ವಿಕ್ರಮಸಿಂಘೆ ಶ್ರೀಲಂಕಾ ಪ್ರಧಾನಿಯಾಗಿ ಮತ್ತೆ ಅಧಿಕಾರಕ್ಕೇರಿದ್ದಾರೆ.

ವಿಕ್ರಮಸಿಂಘೆ ಇಂದು ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಕಳೆದ 51 ದಿನಗಳ ಕಾಲ ನಡೆಯುತ್ತಿದ್ದ ರಾಜಕೀಯ ಸಂಘರ್ಷಕ್ಕೆ ತೆರೆ ಬಿದ್ದಂತಾಗಿದೆ.

ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ವಿಕ್ರಮಸಿಂಘೆ ಅವರಿಗೆ ಇಂದು ಪ್ರಮಾಣವಚನ ಬೋಧಿಸಿದ್ದಾರೆ.

ಕಳೆದ ಅಕ್ಟೋಬರ್ 26ರಂದು ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ, ಪ್ರಧಾನಿ ಹುದ್ದೆಯಿಂದ ಉಚ್ಚಾಟಿತರಾಗಿದ್ದ ವಿಕ್ರಮಸಿಂಘೆ ಇಂದು ಮತ್ತೆ ಅಧಿಕಾರ ಸ್ವೀಕರಿಸಿದರು.

ವಿಕ್ರಮಸಿಂಘೆ ಉಚ್ಚಾಟನಾ ಪ್ರಕ್ರಿಯೆ ದ್ವೀಪರಾಷ್ಟ್ರದ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಅಲ್ಲದೆ ಸಂವಿಧಾನಿಕ ಬಿಕ್ಕಟ್ಟಿಗೆ ಕೂಡ ಕಾರಣವಾಗಿತ್ತು.

ವಿಕ್ರಮಸಿಂಘೆ ಉಚ್ಚಾಟನೆ ಬಳಿಕ ಪ್ರಧಾನಿಯಾಗಿದ್ದ ಮಹಿಂದ ರಾಜಪಕ್ಸೆ, ಶ್ರೀಲಂಕಾ ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ತಮ್ಮ ಪದವಿಗೆ ರಾಜೀನಾಮೆ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಏರಿಕೆಯಾಗ್ತಿರೋ ಚಿನ್ನವನ್ನು ಲಾಭದಾಯಕವಾಗಿ ಹೇಗೆ ಖರೀದಿಸಬೇಕು? ತಜ್ಞರ ಸಲಹೆ