
ನವದೆಹಲಿ (ಡಿ.06): ಮಿತಿ ಮೀರಿದ ವೇಗದ ವಾಹನ ಚಾಲನೆಗೆ ಕಡಿವಾಣ ಹಾಕಲು ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ.
ಮಿತಿ ಮೀರಿದ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಗೆ ಕಠಿಣ ಶಿಕ್ಷೆ ನೀಡುವ ಹಾಗೆ ಕಾಯ್ದೆಯನ್ನು ತಿದ್ದುಪಡಿ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ತಾಕೀತು ಮಾಡಿದೆ.
“ ದುಡುಕು ವಾಹನ ಚಾಲನೆಯಿಂದ ರಸ್ತೆ ಅಪಘಾತಗಳಲ್ಲಿ ಜನರು ಸಾವನ್ನಪ್ಪುತ್ತಿದ್ದಾರೆ. ವಾಹನ ಚಾಲಕರಿಗೆ ಕಾನೂನಿನ ಭಯವಿಲ್ಲದಂತಾಗಿದೆ. ಇಂತವರಿಗೆ ಕಾನೂನಿನ ಭಯ ಹುಟ್ಟಿಸುವ ಅಗತ್ಯವಿದೆ" ಎಂದು ನ್ಯಾ. ದೀಪಕ್ ಮಿಶ್ರಾ ಅಧ್ಯಕ್ಷೀಯ ಪೀಠ ಅಭಿಪ್ರಾಯಪಟ್ಟಿದೆ.
ಭಾರತದಲ್ಲಿ ದಿನವೊಂದಕ್ಕೆ 400 ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿರುವುದಕ್ಕೆ ಸುಪ್ರೀಂ ಕಳವಳ ವ್ಯಕ್ತಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.