
ವಿಧಾನ ಪರಿಷತ್(ನ.22): ಗ್ರಾಮ ಪಂಚಾಯ್ತಿಯಲ್ಲಿ ಅರ್ಜಿ ಸಲ್ಲಿಸಿದರೆ ಸಾಕು. ನಿಮ್ಮ ಮನೆ ಬಾಗಿಲಿಗೆ ಅಂಚೆ ಮೂಲಕ ಪಡಿತರ ಚೀಟಿ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಕೆ.ಪ್ರತಾಪಚಂದ್ರ ಶೆಟ್ಟಿ ಅವರು, ಆರು ತಿಂಗಳಲ್ಲಿ ಇಲಾಖೆಯಿಂದ ಎಷ್ಟು ಸುತ್ತೋಲೆಗಳನ್ನು ಹೊರಡಿಸಲಾಗಿದೆ ಎಂದು ಪ್ರಶ್ನಿಸಿ, ಹೊಸ ಸರ್ಕಾರಗಳು ಬಂದಾಗ ಜನಸಾಮಾನ್ಯರ ಮೇಲೆ ಪ್ರಯೋಗ ನಡೆಸುವಂತೆ ಪಡಿತರ ಚೀಟಿಗಳನ್ನು ಬದಲಾಯಿಸಲಾಗುತ್ತದೆ ಎಂದರು.
ಇದಕ್ಕೆ ಸಚಿವ ಖಾದರ್ ಉತ್ತರಿಸಿ, ಬೇರೆ ಬೇರೆ ಕಾಯ್ದೆ ಅನ್ವಯ ಸುತ್ತೋಲೆಗಳನ್ನು ಹೊರಡಿಸಬೇಕಾಗುತ್ತಿದೆ. ಈ ಮೊದಲು ಪಡಿತರ ಚೀಟಿಗೆ 14 ಅಂಶಗಳನ್ನು ಪರಿಗಣಿಸಲಾಗುತ್ತಿತ್ತು. ಇನ್ನು ಮುಂದೆ ಕೇವಲ ಅರ್ಜಿ ಕೊಟ್ಟರೆ ಸಾಕು. ಆಧಾರ್ ಕಾರ್ಡ್ ಬಿಟ್ಟರೆ ಬೇರೆ ಯಾವ ದಾಖಲೆಯ ಅಗತ್ಯವಿಲ್ಲ. ಮನೆ ಬಾಗಿಲಿಗೆ ಪಡಿತರ ಚೀಟಿ ತಲುಪಿಸಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.