
ಬೆಂಗಳೂರು(ಡಿ.09): ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಅವರ ಸುಪಾರಿ ಹತ್ಯೆ ಮಾಡಲು ಉದ್ದೇಶಿಸಿದ ಪ್ರಕರಣದಲ್ಲಿ ಹಾಯ್ ಬೆಂಗಳೂರು ವಾರಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಬಂಧನದ ನಂತರ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು ಅವರ 2ನೇ ಪತ್ನಿ ಕೂಡ ನಾಪತ್ತೆಯಾಗಿದ್ದಾರೆ .
ಉತ್ತರಹಳ್ಳಿಯ ಯಶೋಮತಿ ಅವರ ನಿವಾಸಕ್ಕೆ ಬೀಗ ಹಾಕಲಾಗಿದ್ದು, ಎಲ್ಲಿ ಹೋಗಿದ್ದಾರೆ ಎಂಬುದರ ಸುಳಿವು ಲಭ್ಯವಿಲ್ಲ. ಅವರ ಫೇಸ್'ಬುಕ್ ಫೋಟೊ ಕೂಡ ಡಿಲೀಟ್ ಆಗಿದೆ. ಸಿಸಿಬಿ ಕಚೇರಿಯಲ್ಲಿ ಪೊಲೀಸರು ವಿಚಾರಣೆ ಆರಂಭಿಸಿದ್ದು, ಸಿಬ್ಬಂದಿಯಿಂದ ಪೆನ್ನು, ಪೇಪರ್ ತರಿಸಿಕೊಂಡಿರುವ ಬೆಳಗೆರೆ ಬರೆಯಲು ಆರಂಭಿಸಿದ್ದಾರೆ.
4 ದಿನ ಪೊಲೀಸ್ ವಶದಲ್ಲಿರುವ ರವಿ ಬೆಳಗೆರೆಯನ್ನು ಸ್ಥಳಾಂತರ ಮಾಡದೆ ಕಚೇರಿಯಲ್ಲಿಯೇ ವಿಚಾರಣೆ ನಡೆಸಲಿದ್ದಾರೆ. ಅವರ ಆರೋಗ್ಯದಲ್ಲಿಯೂ ಯಾವುದೇ ಸಮಸ್ಯೆಯಿಲ್ಲ ಎಂದು ಸಿಸಿಬಿ ಡಿಸಿಪಿ ಜಿನೇಂದ್ರ ಕಣಗಾವಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.